Mysore University
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ (Mysore University) ಅಂಗ ಸಂಸ್ಥೆಯಾದ ಪ್ರಾಚ್ಯವಿದ್ಯಾ ಸಂಶೋಧನಾಲಯವು ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ ಶೃಂಗೇರಿ ಸಂಸ್ಥೆಯೊಂದಿಗೆ ಅಪ್ರಕಟಿತ ಹಸ್ತಪ್ರತಿಗಳಲ್ಲಿರುವ ಕೃತಿಗಳ ಕುರಿತಾದ ಒಂಡು ಒಡಂಬಡಿಕೆ ಸಹಿ ಮಾಡಲಾಗಿದೆ.
ಇದರ ಅಡಿಯಲ್ಲಿ ವಿದ್ವಾಂಸರ ಮೂಲಕ ಅಪ್ರಕಟಿತವಾದ ಅಂದಾಜು 13000 ಹಸ್ತಪ್ರತಿಗಳಲ್ಲಿರುವ ಕೃತಿಗಳ ವರ್ಣನಾತ್ಮಕ ಸೂಚಿಯನ್ನು (Manuscripts Descriptive Catalogue) ಮಾಡಲು, ಆಯ್ದ ಕೃತಿಗಳನ್ನು ಪುಸ್ತಕರೂಪದಲ್ಲಿ ಮುದ್ರಿಸಲು ಮತ್ತು ಮತ್ತು Digitization of catalogues in the form of searchable database ಮಾಡಲು ನಿಶ್ಚಯಮಾಡಲಾಗಿದೆ.
ಈ ಒಡಂಬಡಿಕೆಯ ರೂ.92,40,000/- ಗಳ ಈ ಯೋಜನೆಗೆ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವೆ ಎಂ.ಕೆ.ಸವಿತಾ ಅವರು ಹಾಗೂ ಶ್ರೀ ಶೃಂಗೇರಿ ಶಾರದಾ ಪೀಠದ ಆಡಳಿತಾಧಿಕಾರಿ ಪಿ.ಎ.ಮುರಳಿ ಅವರು ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದರು.
ಈ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿರ್ದೇಶಕ ಡಾ. ಡಿ.ಪಿ. ಮಧುಸೂಧನಾಚಾರ್ಯ, ಪರೀಕ್ಷಾಂಗ ಕುಲಸಚಿವ ಪ್ರೊ.ನಾಗರಾಜು ಹಾಗೂ ಉಭಯ ಸಂಸ್ಥೆಗಳ ವಿದ್ವಾಂಸರು ಉಪಸ್ಥಿತರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…