Mysore University
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ (Mysore University) ಅಂಗ ಸಂಸ್ಥೆಯಾದ ಪ್ರಾಚ್ಯವಿದ್ಯಾ ಸಂಶೋಧನಾಲಯವು ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ ಶೃಂಗೇರಿ ಸಂಸ್ಥೆಯೊಂದಿಗೆ ಅಪ್ರಕಟಿತ ಹಸ್ತಪ್ರತಿಗಳಲ್ಲಿರುವ ಕೃತಿಗಳ ಕುರಿತಾದ ಒಂಡು ಒಡಂಬಡಿಕೆ ಸಹಿ ಮಾಡಲಾಗಿದೆ.
ಇದರ ಅಡಿಯಲ್ಲಿ ವಿದ್ವಾಂಸರ ಮೂಲಕ ಅಪ್ರಕಟಿತವಾದ ಅಂದಾಜು 13000 ಹಸ್ತಪ್ರತಿಗಳಲ್ಲಿರುವ ಕೃತಿಗಳ ವರ್ಣನಾತ್ಮಕ ಸೂಚಿಯನ್ನು (Manuscripts Descriptive Catalogue) ಮಾಡಲು, ಆಯ್ದ ಕೃತಿಗಳನ್ನು ಪುಸ್ತಕರೂಪದಲ್ಲಿ ಮುದ್ರಿಸಲು ಮತ್ತು ಮತ್ತು Digitization of catalogues in the form of searchable database ಮಾಡಲು ನಿಶ್ಚಯಮಾಡಲಾಗಿದೆ.
ಈ ಒಡಂಬಡಿಕೆಯ ರೂ.92,40,000/- ಗಳ ಈ ಯೋಜನೆಗೆ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವೆ ಎಂ.ಕೆ.ಸವಿತಾ ಅವರು ಹಾಗೂ ಶ್ರೀ ಶೃಂಗೇರಿ ಶಾರದಾ ಪೀಠದ ಆಡಳಿತಾಧಿಕಾರಿ ಪಿ.ಎ.ಮುರಳಿ ಅವರು ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದರು.
ಈ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿರ್ದೇಶಕ ಡಾ. ಡಿ.ಪಿ. ಮಧುಸೂಧನಾಚಾರ್ಯ, ಪರೀಕ್ಷಾಂಗ ಕುಲಸಚಿವ ಪ್ರೊ.ನಾಗರಾಜು ಹಾಗೂ ಉಭಯ ಸಂಸ್ಥೆಗಳ ವಿದ್ವಾಂಸರು ಉಪಸ್ಥಿತರಿದ್ದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…