ಮೈಸೂರು

ಮೈಸೂರು ವಿ.ವಿ 106ನೇ ಘಟಿಕೋತ್ಸವ : 30,966 ಅಭ್ಯರ್ಥಿಗಳಿಗೆ ಪದವಿ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವವು ಜ.5ರಂದು ಬೆಳಿಗ್ಗೆ 11:30ಕ್ಕೆ ಕ್ರಾಫರ್ಡ್‌ ಭವನದಲ್ಲಿ ನಡೆಯಲಿದೆ. ಒಟ್ಟು 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದ್ದು, ಇವರಲ್ಲಿ 18,612 ವಿದ್ಯಾರ್ಥಿನಿಯರಿದ್ದರೆ, 12,354ವಿದ್ಯಾರ್ಥಿಗಳಿದ್ದಾರೆ ಎಂದು ವಿ.ವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದರು.

ವಿವಿ ಕ್ರಾಫರ್ಡ್ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ 3,551 ವಿದ್ಯಾರ್ಥಿನಿಯರು ಸೇರಿದಂತೆ 5,796 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಗೆ ಹಾಗೂ 14,850 ವಿದ್ಯಾರ್ಥಿನಿಯರು ಸೇರಿದಂತೆ 24,721 ವಿದ್ಯಾರ್ಥಿಗಳು ಸ್ನಾತಕ ಪದವಿಗೆ ಅರ್ಹರಾಗಿದ್ದಾರೆ ಎಂದರು.

449 ಮಂದಿಗೆ ಪಿಎಚ್.ಡಿ
ಈ ಬಾರಿ 449 ಅಭ್ಯರ್ಥಿಗಳು ಪಿಎಚ್.ಡಿ. ಪದವಿ ಪಡೆದುಕೊಳ್ಳುತ್ತಿದ್ದು, ಇವರಲ್ಲಿ 211 ಮಹಿಳೆಯರಿದ್ದರೆ, 238 ಪುರುಷರು. ಕಲಾ ವಿಭಾಗದಲ್ಲಿ 152, ವಾಣಿಜ್ಯ ನಿಕಾಯದಲ್ಲಿ 142, ಶಿಕ್ಷಣ ನಿಕಾಯದಲ್ಲಿ 5, ಕಾನೂನು ನಿಕಾಯದಲ್ಲಿ 1 ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ ದಲ್ಲಿ 148 ಅಭ್ಯರ್ಥಿಗಳು ಪಿಎಚ್.ಡಿ. ಪದವಿ ಪಡೆಯಲಿದ್ದಾರೆ.

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮೊದಲ ಘಟಿಕೋತ್ಸವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020-21ನೇ ಸಾಲಿನಲ್ಲಿ ಇಂಜಿನಿಯರಿಂಗ್ ಕೋರ್ಸ್ ಪ್ರಾರಂಭಿಸಲಾಯಿತು. ಕಂಪ್ಯೂಟರ್ ಸೈನ್ಸ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್ ಡಾಟಾ ಸೈನ್ಸ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆಂಡ್ ಮಷಿನ್ ಲರ್ನಿಂಗ್, ಕಂಪ್ಯೂಟರ್ ಸೈನ್ಸ್ ಅಂಡ್ ಡಿಸೈನಿಂಗ್, ಬಯೋಮೆಡಿಕಲ್ ಅಂಡ್ ರೊಬೊಟಿಕ್ಸ್ ಇಂಜಿನಿಯರಿಂಗ್ ಹಾಗೂ ಸಿವಿಲ್ ಇಂಜಿನಿಯ ರಿಂಗ್ ವಿಭಾಗಗಳನ್ನು ತೆರೆಯಲಾಯಿತು. ಇದೀಗ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸಿದ್ದಾರೆ. ಹೀಗಾಗಿ 140 ವಿದ್ಯಾರ್ಥಿಗಳು ಸೋಮವಾರ ನಡೆಯುವ ಘಟಿಕೋತ್ಸವದಲ್ಲಿ ಪದವಿ ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಅದಿತಿಗೆ 24 ಚಿನ್ನದ ಪದಕ:
ಮಾನಸಗಂಗೋತ್ರಿಯಲ್ಲಿ ರಾಸಾಯನ ಶಾಸ್ತ್ರ ವಿಷಯದಲ್ಲಿ ವ್ಯಾಸಂಗ ಮಾಡಿದ ಎನ್.ಅದಿತಿ ಅವರು 24 ಚಿನ್ನದ ಪದಕ ಗಳಿಸಿದ್ದು, 7 ನಗದು ಬಹುಮಾನ ಲಭಿಸಿದೆ. ಆ ಮೂಲಕ ಅತಿ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಯಾಗಿ ಹೊರಹೊಮ್ಮಿದ್ದಾರೆ. ಉಳಿದಂತೆ 442 ಪದಕ ಮತ್ತು 197 ನಗದು ಬಹುಮಾನವನ್ನು 213 ಅಭ್ಯರ್ಥಿಗಳು ಪಡೆದುಕೊಂಡಿದ್ದಾರೆ, ಇದರಲ್ಲಿ 158 ಮಹಿಳೆಯರೇ ಇದ್ದಾರೆ.

ಉಳಿದಂತೆ ಬಿಎಸ್ಸಿಯಲ್ಲಿ ಹರ್ಮನ್‌ಗೆ 6 ಚಿನ್ನದ ಪದಕ ಹಾಗೂ 6 ನಗದು ಬಹುಮಾನ ಒಲಿದಿದೆ. ಬಿಎನಲ್ಲಿ ವರ್ಣಿಕಾ ಬಿ.ಎಸ್. ಅವರಿಗೆ 5 ಚಿನ್ನದ ಪದಕ ಹಾಗೂ 6 ನಗದು ಬಹುಮಾನ ಬಂದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago