ಮೈಸೂರು

ಮೈಸೂರು ವಿ.ವಿ: ಸಂಶೋಧನಾ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದ್ದು,  ಸಂಶೋಧನಾ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ.55 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2023-24 ನೇ ಸಾಲಿನ 20 ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತಿ ಮಾಹೆ ರೂ.12,000 ಗಳಂತೆ 03 ವರ್ಷದ ಅವಧಿಗೆ ಶಿಷ್ಯವೇತನಕ್ಕೆ ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಜೂನ್.10 ರಂದು ಕಛೇರಿ ವೇಳೆಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 01 ಸಂಜೆ 5.30 ಗಂಟೆಯೊಳಗೆ ನಿಗದಿಪಡಿಸಿದ ದಾಖಲೆಗಳೊಂದಿಗೆ ಮಾರ್ಗದರ್ಶಕರು ಹಾಗೂ ವಿಭಾಗದ ಅಧ್ಯಕ್ಷರು/ನಿರ್ದೇಶಕರು/ಪ್ರಾಂಶುಪಾಲರ ಮುಖಾಂತರ ಹಿಂದುಳಿದ ವರ್ಗಗಳ ಘಟಕದ ಸಂಯೋಜನಾಧಿಕಾರಿಗಳಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದವರಾಗಿದ್ದು, ಮೈಸೂರು ವಿಶ್ವವಿದ್ಯಾನಿಲಯದಿಂದ (ಸ್ವಾಯತ್ತ ಸಂಸ್ಥೆಗಳನ್ನು ಹೊರತುಪಡಿಸಿ) ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಅಭ್ಯರ್ಥಿಯು 23 ರಿಂದ 35 ವಯಸ್ಸಿನವರಾಗಿರಬೇಕು. Category-1 ಅಭ್ಯರ್ಥಿಗಳ ವಾರ್ಷಿಕ ಆದಾಯ ರೂ.4.50 ಲಕ್ಷ, Category-II(A), II(B), III(A) ಮತ್ತು III(B) ಅಭ್ಯರ್ಥಿಗಳ ವಾರ್ಷಿಕ ಆದಾಯ ರೂ.3.50 ಲಕ್ಷ ವಾರ್ಷಿಕ ಆದಾಯವನ್ನು ಮೀರಿರಬಾರದು. ಆದಾಯ ಮತ್ತು ಜಾತಿ ಪ್ರಮಾಣ ಪತ್ರವು ಅಧಿಸೂಚನೆ ಹೊರಡಿಸಿದ ದಿನಾಂಕದಲ್ಲಿ ಚಾಲ್ತಿಯಲ್ಲಿರಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2419906 ಹಾಗೂ ಇ-ಮೇಲ್: obccell@unimysore.ac.in ನ್ನು ಸಂಪರ್ಕಿಸಬಹುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಾತಿವಾದಿ ಮನಸ್ಸುಗಳಿಗೆ ಸಮಾನತೆಯ ದರ್ಶನ

ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…

3 mins ago

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

9 mins ago

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

9 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

10 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

10 hours ago