Mysore University approves new textbook for UG PG
ಮೈಸೂರು : ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ನೂತನವಾಗಿ ತಯಾರಿಸಲಾಗಿರುವ ಪಠ್ಯಕ್ಕೆ ಶಿಕ್ಷಣ ಮಂಡಳಿ ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಸೋಮವಾರ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಸಾಲಿನ ಪ್ರಥಮ ಶಿಕ್ಷಣ ಮಂಡಳಿ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಪಠ್ಯ ಬದಲಾವಣೆ ರಾಜ್ಯ ಸರ್ಕಾರ ಮತ್ತು ಸ್ಟೇಟ್ ಎಜುಕೇಷನ್ ಕಮಿಷನ್ ಬದ್ಧತೆಯಾಗಿದೆ. ಪಠ್ಯ ಬದಲಾವಣೆ ಸಂಬಂಧ ಕಮಿಷನ್ ಪೂರ್ಣ ವರದಿ ಸಲ್ಲಿಸಿದೆ. ಜುಲೈ ತಿಂಗಳಲ್ಲಿ ವರದಿ ಬಿಡುಗಡೆಯಾಗಬಹುದು. ಸರ್ಕಾರದ ಆದೇಶಕ್ಕೆ ಬದ್ಧರಾಗಿ ಸಣ್ಣಪುಟ್ಟ ಬದಲಾವಣೆ ಇದ್ದರೆ ಮಾಡಬೇಕಾಗುತ್ತದೆ ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಹೇಳಿದರು.
ಪ್ರಥಮ ಸಭೆಯಲ್ಲಿ ದತ್ತಿ ಸ್ಥಾಪನೆ ಘೋಷಣೆ: ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ನಾಮನಿರ್ದೇಶನಗೊಂಡ ಪ್ರಥಮ ಸಭೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಕೆ. ವಿವೇಕಾನಂದ ಅವರು ತಮ್ಮ ಪೋಷಕರ ಹೆಸರಿನಲ್ಲಿ ದತ್ತಿ ಸ್ಥಾಪಿಸುವುದಾಗಿ ಘೋಷಿಸಿದರು.
ಚಿನ್ನದ ಪದಕ, ದತ್ತಿ ಸ್ಥಾಪನೆಗೆ ಒಪ್ಪಿಗೆ ಕೊಡುವ ವೇಳೆ ಮಾಹಿತಿ ಪಡೆದುಕೊಂಡ ಅವರು, ಕೂಡಲೇ ದತ್ತಿ ಸ್ಥಾಪಿಸುವುದಾಗಿ ಪ್ರಕಟಿಸಿದರು. ಸಭೆಯು ಕೆ. ವಿವೇಕಾನಂದರ ನಿರ್ಧಾರವನ್ನು ಸ್ವಾಗತಿಸಿತು. ಸಭೆಯಲ್ಲಿ ಕುಲಸಚಿವೆ ಎಂ.ಕೆ. ಸವಿತಾ, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜ್, ಹಣಕಾಸು ಅಧಿಕಾರಿ ಕೆ.ಎಸ್.ರೇಖಾ ಮತ್ತಿತರರು ಹಾಜರಿದ್ದರು.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…