ಮೈಸೂರು

ಯುಜಿ, ಪಿಜಿ ನೂತನ ಪಠ್ಯಕ್ಕೆ ಮೈಸೂರು ವಿ.ವಿ ಒಪ್ಪಿಗೆ

ಮೈಸೂರು : ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ನೂತನವಾಗಿ ತಯಾರಿಸಲಾಗಿರುವ ಪಠ್ಯಕ್ಕೆ ಶಿಕ್ಷಣ ಮಂಡಳಿ ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಸೋಮವಾರ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಸಾಲಿನ ಪ್ರಥಮ ಶಿಕ್ಷಣ ಮಂಡಳಿ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಪಠ್ಯ ಬದಲಾವಣೆ ರಾಜ್ಯ ಸರ್ಕಾರ ಮತ್ತು ಸ್ಟೇಟ್ ಎಜುಕೇಷನ್ ಕಮಿಷನ್ ಬದ್ಧತೆಯಾಗಿದೆ. ಪಠ್ಯ ಬದಲಾವಣೆ ಸಂಬಂಧ ಕಮಿಷನ್ ಪೂರ್ಣ ವರದಿ ಸಲ್ಲಿಸಿದೆ. ಜುಲೈ ತಿಂಗಳಲ್ಲಿ ವರದಿ ಬಿಡುಗಡೆಯಾಗಬಹುದು. ಸರ್ಕಾರದ ಆದೇಶಕ್ಕೆ ಬದ್ಧರಾಗಿ ಸಣ್ಣಪುಟ್ಟ ಬದಲಾವಣೆ ಇದ್ದರೆ ಮಾಡಬೇಕಾಗುತ್ತದೆ ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಹೇಳಿದರು.

ಪ್ರಥಮ ಸಭೆಯಲ್ಲಿ ದತ್ತಿ ಸ್ಥಾಪನೆ ಘೋಷಣೆ: ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ನಾಮನಿರ್ದೇಶನಗೊಂಡ ಪ್ರಥಮ ಸಭೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಕೆ. ವಿವೇಕಾನಂದ ಅವರು ತಮ್ಮ ಪೋಷಕರ ಹೆಸರಿನಲ್ಲಿ ದತ್ತಿ ಸ್ಥಾಪಿಸುವುದಾಗಿ ಘೋಷಿಸಿದರು.

ಚಿನ್ನದ ಪದಕ, ದತ್ತಿ ಸ್ಥಾಪನೆಗೆ ಒಪ್ಪಿಗೆ ಕೊಡುವ ವೇಳೆ ಮಾಹಿತಿ ಪಡೆದುಕೊಂಡ ಅವರು, ಕೂಡಲೇ ದತ್ತಿ ಸ್ಥಾಪಿಸುವುದಾಗಿ ಪ್ರಕಟಿಸಿದರು. ಸಭೆಯು ಕೆ. ವಿವೇಕಾನಂದರ ನಿರ್ಧಾರವನ್ನು ಸ್ವಾಗತಿಸಿತು. ಸಭೆಯಲ್ಲಿ ಕುಲಸಚಿವೆ ಎಂ.ಕೆ. ಸವಿತಾ, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜ್, ಹಣಕಾಸು ಅಧಿಕಾರಿ ಕೆ.ಎಸ್.ರೇಖಾ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

6 hours ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

7 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್‌ ವಿರುದ್ಧ ಇನ್ನೊಂದು ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…

11 hours ago

ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಪೊಳ್ದ್ ಆಚರಣೆ

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…

11 hours ago

ಸೆ.21 ರಿಂದ ಮೂರು ದಿನ ವಿಧಾನಮಂಡಲದ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…

11 hours ago

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

13 hours ago