ಮೈಸೂರು

ಯುಜಿ, ಪಿಜಿ ನೂತನ ಪಠ್ಯಕ್ಕೆ ಮೈಸೂರು ವಿ.ವಿ ಒಪ್ಪಿಗೆ

ಮೈಸೂರು : ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ನೂತನವಾಗಿ ತಯಾರಿಸಲಾಗಿರುವ ಪಠ್ಯಕ್ಕೆ ಶಿಕ್ಷಣ ಮಂಡಳಿ ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಸೋಮವಾರ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಸಾಲಿನ ಪ್ರಥಮ ಶಿಕ್ಷಣ ಮಂಡಳಿ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಪಠ್ಯ ಬದಲಾವಣೆ ರಾಜ್ಯ ಸರ್ಕಾರ ಮತ್ತು ಸ್ಟೇಟ್ ಎಜುಕೇಷನ್ ಕಮಿಷನ್ ಬದ್ಧತೆಯಾಗಿದೆ. ಪಠ್ಯ ಬದಲಾವಣೆ ಸಂಬಂಧ ಕಮಿಷನ್ ಪೂರ್ಣ ವರದಿ ಸಲ್ಲಿಸಿದೆ. ಜುಲೈ ತಿಂಗಳಲ್ಲಿ ವರದಿ ಬಿಡುಗಡೆಯಾಗಬಹುದು. ಸರ್ಕಾರದ ಆದೇಶಕ್ಕೆ ಬದ್ಧರಾಗಿ ಸಣ್ಣಪುಟ್ಟ ಬದಲಾವಣೆ ಇದ್ದರೆ ಮಾಡಬೇಕಾಗುತ್ತದೆ ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಹೇಳಿದರು.

ಪ್ರಥಮ ಸಭೆಯಲ್ಲಿ ದತ್ತಿ ಸ್ಥಾಪನೆ ಘೋಷಣೆ: ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ನಾಮನಿರ್ದೇಶನಗೊಂಡ ಪ್ರಥಮ ಸಭೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಕೆ. ವಿವೇಕಾನಂದ ಅವರು ತಮ್ಮ ಪೋಷಕರ ಹೆಸರಿನಲ್ಲಿ ದತ್ತಿ ಸ್ಥಾಪಿಸುವುದಾಗಿ ಘೋಷಿಸಿದರು.

ಚಿನ್ನದ ಪದಕ, ದತ್ತಿ ಸ್ಥಾಪನೆಗೆ ಒಪ್ಪಿಗೆ ಕೊಡುವ ವೇಳೆ ಮಾಹಿತಿ ಪಡೆದುಕೊಂಡ ಅವರು, ಕೂಡಲೇ ದತ್ತಿ ಸ್ಥಾಪಿಸುವುದಾಗಿ ಪ್ರಕಟಿಸಿದರು. ಸಭೆಯು ಕೆ. ವಿವೇಕಾನಂದರ ನಿರ್ಧಾರವನ್ನು ಸ್ವಾಗತಿಸಿತು. ಸಭೆಯಲ್ಲಿ ಕುಲಸಚಿವೆ ಎಂ.ಕೆ. ಸವಿತಾ, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜ್, ಹಣಕಾಸು ಅಧಿಕಾರಿ ಕೆ.ಎಸ್.ರೇಖಾ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

12 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

12 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

13 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

14 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

14 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

16 hours ago