ಮೈಸೂರು

ಮೈಸೂರು ವಿವಿ ಘಟಿಕೋತ್ಸವ | ವಿದ್ಯಾರ್ಥಿನಿಯರೇ ಪ್ರಾಬಲ್ಯ; ಚಿನ್ನದ ಹುಡುಗಿಯರ ಸಾಧನೆ

ಮೈಸೂರು: ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂದೇ ಖ್ಯಾತಿ ಪಡೆದಿರುವ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಪದವಿ, ಚಿನ್ನದ ಪದಕ ಮತ್ತು ನಗದು ಬಹುಮಾನ ಪಡೆಯುವಲ್ಲಿ ವಿದ್ಯಾರ್ಥಿನಿಯರೇ ಪ್ರಾಬಲ್ಯ ಮೆರೆದಿದ್ದಾರೆ.

ಶನಿವಾರ ವಿಶ್ವವಿದ್ಯಾಲಯದ ಕ್ರಾಫರ್ಡ್‌ ಭವನದಲ್ಲಿ ನಡೆದ 105ನೇ ಘಟಿಕೋತ್ಸವದಲ್ಲಿ ಮಹಿಳಾ ಮೇಲುಗೈ ಕಂಡು ಬಂತು. ಪದವಿ ಗಳಿಸಿದ 31,689 ಅಭ್ಯರ್ಥಿಗಳ ಪೈಕಿ 20,222 ವಿದ್ಯಾರ್ಥಿನಿಯರು. 304 ಪಿಎಚ್‌ಡಿ ಪದವಿದರರಲ್ಲಿ 139 ಮಹಿಳೆಯರು. ಒಟ್ಟು 413 ಚಿನ್ನದ ಪದಕದಲ್ಲಿ 139 ವಿದ್ಯಾರ್ಥಿಗಳು ಹೆಚ್ಚಿನ ಪಾಲು ತಮ್ಮದಾಗಿಸಿಕೊಂಡರು.

ಚಿನ್ನದ ಹುಡುಗಿಯರು ಇವರು…

ಚಿನ್ನದ ಹುಡುಗಿ ಭೂಮಿಕ
ರಸಾಯನ ಶಾಸ್ತ್ರ ಸ್ನಾತಕೋತ್ತರ ವಿಭಾಗದಲ್ಲಿ ಮಾನಸಗಂಗೋತ್ರಿಯ ಎಂ.ಆರ್‌ ಭೂಮಿಕ  1 8ಚಿನ್ನದ ಪದಕ, 4 ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡರು. ಅಪ್ಪ ಅಮ್ಮ ಕನಸಿನಂತೆ ಕ್ರಾಫರ್ಡ್‌ ಭವನದಲ್ಲಿ ಸನ್ಮಾನಿತೆಯಾಗಿದ್ದೇನೆ. ಆದರೆ ಆ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಅಪ್ಪ ಈಗ ಇಲ್ಲ ಎಂದು ಭೂಮಿಕ ಹೇಳಿದರು. ಮದ್ರಾಸ್‌ ಐಐಟಿಯಲ್ಲಿ ಪಿಎಚ್‌ಡಿ ಮಾಡಬೇಕು, ಐಎಎಸ್‌ ಅಧಿಕಾರಿ ಆಗಬೇಕು ಎಂಬ ಆಸೆ ಇದು ಎಂದು ತಮ್ಮ ಕನಸನ್ನು ಹಂಚಿಕೊಂಡರು.

ಮಂಗಳೂರಿನ ಕಾವ್ಯಶ್ರೀ

ಅರ್ಬಲ್‌ ಅಂಡ್‌ ರೀಜನಲ್‌ ಪ್ಲಾನಿಂಗ್‌ ವಿಷಯದಲ್ಲಿ 16 ಚಿನ್ನದ ಪದಕ ಪಡೆದ ಮಂಗಳೂರಿನ ಯು.ಎ ಕಾವ್ಯಶ್ರೀ ಪದವಿಯಲ್ಲೂ ಚಿನ್ನದ ಪದಕ ಬೇಟೆಯಾಡಿದ್ದರು.

ವಿವಿನ ಸಾಧನೆ

ಎಂಎಸ್ಸಿ ಸಸ್ಯಶಾಸ್ತ್ರದಲ್ಲಿ 10 ಚಿನ್ನದ ಪದಕ ಹಾಗೂ 2 ನಗದು ಬಹುಮಾನ ತಮ್ಮದಾಗಿಸಿಕೊಂಡ ವಿವಿನ ಸ್ವೀಡಲ್‌ ಥೋರಸ್‌ ಕೊಡಗಿನ ಗೋಣಿಕೊಪ್ಪದವರು. ಪಿಎಚ್‌ಡಿ ಪದವಿ ಪಡೆಯಬೇಕು. ಶಿಕ್ಷಕಿಯಾಗಬೇಕು ಎಂದು ತನ್ನ ಕನಸಿನ ಆಸೆ ಬಿಚ್ಚಿಟ್ಟರು.

ಕಾಸರಗೋಡಿನ ಸೀಮಾ
ಕೇರಳದ ಕಾಸರಗೋಡಿನ ಸೀಮಾ ಹೆಗೆಡೆ ಸಂಸ್ಕೃತ ವಿಷಯದಲ್ಲಿ 13 ಚಿನ್ನದ ಪದಕ ಮತ್ತು 1 ನಗದು ಬಹುಮಾನ ಗಳಿಸಿದ್ದಾರೆ. ಕೃಷಿಕ ಕುಟುಂಬದಲ್ಲಿ ಜನಿಸಿದ ಈಕೆ ಭಗವದ್ಗೀತೆಯ ಹಾಡುಗಾರ್ತಿಯೂ ಹೌದು. ಶಿಕ್ಷಕಿಯಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಗುರಿ ಇದೆ ಎಂದು ಹೇಳಿದರು.

ಕುಣಿಗಲ್‌ ಕಾವ್ಯ
ಎಚ್‌.ಡಿ ಕೋಟೆಯ ಕುಣಿಗಲ್‌ ಗ್ರಾಮದ ಕೊಲಿ ಕೆಲಸಗಾರ ಚಿಕ್ಕನಾಯಕ-ದೇವಾಲಮ್ಮ ಪುತ್ರಿ ಸಿ.ಕಾವ್ಯ ಎಂ.ಎ ಕನ್ನಡದಲ್ಲಿ 11 ಪದಕ ಹಾಗೂ 5 ನಗದು ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

2 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

2 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

2 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

2 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

3 hours ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

3 hours ago