ಮೈಸೂರು

ಮೈಸೂರು ವಿವಿ ಘಟಿಕೋತ್ಸವ | ವಿದ್ಯಾರ್ಥಿನಿಯರೇ ಪ್ರಾಬಲ್ಯ; ಚಿನ್ನದ ಹುಡುಗಿಯರ ಸಾಧನೆ

ಮೈಸೂರು: ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂದೇ ಖ್ಯಾತಿ ಪಡೆದಿರುವ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಪದವಿ, ಚಿನ್ನದ ಪದಕ ಮತ್ತು ನಗದು ಬಹುಮಾನ ಪಡೆಯುವಲ್ಲಿ ವಿದ್ಯಾರ್ಥಿನಿಯರೇ ಪ್ರಾಬಲ್ಯ ಮೆರೆದಿದ್ದಾರೆ.

ಶನಿವಾರ ವಿಶ್ವವಿದ್ಯಾಲಯದ ಕ್ರಾಫರ್ಡ್‌ ಭವನದಲ್ಲಿ ನಡೆದ 105ನೇ ಘಟಿಕೋತ್ಸವದಲ್ಲಿ ಮಹಿಳಾ ಮೇಲುಗೈ ಕಂಡು ಬಂತು. ಪದವಿ ಗಳಿಸಿದ 31,689 ಅಭ್ಯರ್ಥಿಗಳ ಪೈಕಿ 20,222 ವಿದ್ಯಾರ್ಥಿನಿಯರು. 304 ಪಿಎಚ್‌ಡಿ ಪದವಿದರರಲ್ಲಿ 139 ಮಹಿಳೆಯರು. ಒಟ್ಟು 413 ಚಿನ್ನದ ಪದಕದಲ್ಲಿ 139 ವಿದ್ಯಾರ್ಥಿಗಳು ಹೆಚ್ಚಿನ ಪಾಲು ತಮ್ಮದಾಗಿಸಿಕೊಂಡರು.

ಚಿನ್ನದ ಹುಡುಗಿಯರು ಇವರು…

ಚಿನ್ನದ ಹುಡುಗಿ ಭೂಮಿಕ
ರಸಾಯನ ಶಾಸ್ತ್ರ ಸ್ನಾತಕೋತ್ತರ ವಿಭಾಗದಲ್ಲಿ ಮಾನಸಗಂಗೋತ್ರಿಯ ಎಂ.ಆರ್‌ ಭೂಮಿಕ  1 8ಚಿನ್ನದ ಪದಕ, 4 ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡರು. ಅಪ್ಪ ಅಮ್ಮ ಕನಸಿನಂತೆ ಕ್ರಾಫರ್ಡ್‌ ಭವನದಲ್ಲಿ ಸನ್ಮಾನಿತೆಯಾಗಿದ್ದೇನೆ. ಆದರೆ ಆ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಅಪ್ಪ ಈಗ ಇಲ್ಲ ಎಂದು ಭೂಮಿಕ ಹೇಳಿದರು. ಮದ್ರಾಸ್‌ ಐಐಟಿಯಲ್ಲಿ ಪಿಎಚ್‌ಡಿ ಮಾಡಬೇಕು, ಐಎಎಸ್‌ ಅಧಿಕಾರಿ ಆಗಬೇಕು ಎಂಬ ಆಸೆ ಇದು ಎಂದು ತಮ್ಮ ಕನಸನ್ನು ಹಂಚಿಕೊಂಡರು.

ಮಂಗಳೂರಿನ ಕಾವ್ಯಶ್ರೀ

ಅರ್ಬಲ್‌ ಅಂಡ್‌ ರೀಜನಲ್‌ ಪ್ಲಾನಿಂಗ್‌ ವಿಷಯದಲ್ಲಿ 16 ಚಿನ್ನದ ಪದಕ ಪಡೆದ ಮಂಗಳೂರಿನ ಯು.ಎ ಕಾವ್ಯಶ್ರೀ ಪದವಿಯಲ್ಲೂ ಚಿನ್ನದ ಪದಕ ಬೇಟೆಯಾಡಿದ್ದರು.

ವಿವಿನ ಸಾಧನೆ

ಎಂಎಸ್ಸಿ ಸಸ್ಯಶಾಸ್ತ್ರದಲ್ಲಿ 10 ಚಿನ್ನದ ಪದಕ ಹಾಗೂ 2 ನಗದು ಬಹುಮಾನ ತಮ್ಮದಾಗಿಸಿಕೊಂಡ ವಿವಿನ ಸ್ವೀಡಲ್‌ ಥೋರಸ್‌ ಕೊಡಗಿನ ಗೋಣಿಕೊಪ್ಪದವರು. ಪಿಎಚ್‌ಡಿ ಪದವಿ ಪಡೆಯಬೇಕು. ಶಿಕ್ಷಕಿಯಾಗಬೇಕು ಎಂದು ತನ್ನ ಕನಸಿನ ಆಸೆ ಬಿಚ್ಚಿಟ್ಟರು.

ಕಾಸರಗೋಡಿನ ಸೀಮಾ
ಕೇರಳದ ಕಾಸರಗೋಡಿನ ಸೀಮಾ ಹೆಗೆಡೆ ಸಂಸ್ಕೃತ ವಿಷಯದಲ್ಲಿ 13 ಚಿನ್ನದ ಪದಕ ಮತ್ತು 1 ನಗದು ಬಹುಮಾನ ಗಳಿಸಿದ್ದಾರೆ. ಕೃಷಿಕ ಕುಟುಂಬದಲ್ಲಿ ಜನಿಸಿದ ಈಕೆ ಭಗವದ್ಗೀತೆಯ ಹಾಡುಗಾರ್ತಿಯೂ ಹೌದು. ಶಿಕ್ಷಕಿಯಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಗುರಿ ಇದೆ ಎಂದು ಹೇಳಿದರು.

ಕುಣಿಗಲ್‌ ಕಾವ್ಯ
ಎಚ್‌.ಡಿ ಕೋಟೆಯ ಕುಣಿಗಲ್‌ ಗ್ರಾಮದ ಕೊಲಿ ಕೆಲಸಗಾರ ಚಿಕ್ಕನಾಯಕ-ದೇವಾಲಮ್ಮ ಪುತ್ರಿ ಸಿ.ಕಾವ್ಯ ಎಂ.ಎ ಕನ್ನಡದಲ್ಲಿ 11 ಪದಕ ಹಾಗೂ 5 ನಗದು ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

3 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

4 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

5 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

6 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

7 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

8 hours ago