ಮೈಸೂರು

ಮೈಸೂರು ವಿವಿ ಘಟಿಕೋತ್ಸವ | ವಿದ್ಯಾರ್ಥಿನಿಯರೇ ಪ್ರಾಬಲ್ಯ; ಚಿನ್ನದ ಹುಡುಗಿಯರ ಸಾಧನೆ

ಮೈಸೂರು: ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂದೇ ಖ್ಯಾತಿ ಪಡೆದಿರುವ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಪದವಿ, ಚಿನ್ನದ ಪದಕ ಮತ್ತು ನಗದು ಬಹುಮಾನ ಪಡೆಯುವಲ್ಲಿ ವಿದ್ಯಾರ್ಥಿನಿಯರೇ ಪ್ರಾಬಲ್ಯ ಮೆರೆದಿದ್ದಾರೆ.

ಶನಿವಾರ ವಿಶ್ವವಿದ್ಯಾಲಯದ ಕ್ರಾಫರ್ಡ್‌ ಭವನದಲ್ಲಿ ನಡೆದ 105ನೇ ಘಟಿಕೋತ್ಸವದಲ್ಲಿ ಮಹಿಳಾ ಮೇಲುಗೈ ಕಂಡು ಬಂತು. ಪದವಿ ಗಳಿಸಿದ 31,689 ಅಭ್ಯರ್ಥಿಗಳ ಪೈಕಿ 20,222 ವಿದ್ಯಾರ್ಥಿನಿಯರು. 304 ಪಿಎಚ್‌ಡಿ ಪದವಿದರರಲ್ಲಿ 139 ಮಹಿಳೆಯರು. ಒಟ್ಟು 413 ಚಿನ್ನದ ಪದಕದಲ್ಲಿ 139 ವಿದ್ಯಾರ್ಥಿಗಳು ಹೆಚ್ಚಿನ ಪಾಲು ತಮ್ಮದಾಗಿಸಿಕೊಂಡರು.

ಚಿನ್ನದ ಹುಡುಗಿಯರು ಇವರು…

ಚಿನ್ನದ ಹುಡುಗಿ ಭೂಮಿಕ
ರಸಾಯನ ಶಾಸ್ತ್ರ ಸ್ನಾತಕೋತ್ತರ ವಿಭಾಗದಲ್ಲಿ ಮಾನಸಗಂಗೋತ್ರಿಯ ಎಂ.ಆರ್‌ ಭೂಮಿಕ  1 8ಚಿನ್ನದ ಪದಕ, 4 ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡರು. ಅಪ್ಪ ಅಮ್ಮ ಕನಸಿನಂತೆ ಕ್ರಾಫರ್ಡ್‌ ಭವನದಲ್ಲಿ ಸನ್ಮಾನಿತೆಯಾಗಿದ್ದೇನೆ. ಆದರೆ ಆ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಅಪ್ಪ ಈಗ ಇಲ್ಲ ಎಂದು ಭೂಮಿಕ ಹೇಳಿದರು. ಮದ್ರಾಸ್‌ ಐಐಟಿಯಲ್ಲಿ ಪಿಎಚ್‌ಡಿ ಮಾಡಬೇಕು, ಐಎಎಸ್‌ ಅಧಿಕಾರಿ ಆಗಬೇಕು ಎಂಬ ಆಸೆ ಇದು ಎಂದು ತಮ್ಮ ಕನಸನ್ನು ಹಂಚಿಕೊಂಡರು.

ಮಂಗಳೂರಿನ ಕಾವ್ಯಶ್ರೀ

ಅರ್ಬಲ್‌ ಅಂಡ್‌ ರೀಜನಲ್‌ ಪ್ಲಾನಿಂಗ್‌ ವಿಷಯದಲ್ಲಿ 16 ಚಿನ್ನದ ಪದಕ ಪಡೆದ ಮಂಗಳೂರಿನ ಯು.ಎ ಕಾವ್ಯಶ್ರೀ ಪದವಿಯಲ್ಲೂ ಚಿನ್ನದ ಪದಕ ಬೇಟೆಯಾಡಿದ್ದರು.

ವಿವಿನ ಸಾಧನೆ

ಎಂಎಸ್ಸಿ ಸಸ್ಯಶಾಸ್ತ್ರದಲ್ಲಿ 10 ಚಿನ್ನದ ಪದಕ ಹಾಗೂ 2 ನಗದು ಬಹುಮಾನ ತಮ್ಮದಾಗಿಸಿಕೊಂಡ ವಿವಿನ ಸ್ವೀಡಲ್‌ ಥೋರಸ್‌ ಕೊಡಗಿನ ಗೋಣಿಕೊಪ್ಪದವರು. ಪಿಎಚ್‌ಡಿ ಪದವಿ ಪಡೆಯಬೇಕು. ಶಿಕ್ಷಕಿಯಾಗಬೇಕು ಎಂದು ತನ್ನ ಕನಸಿನ ಆಸೆ ಬಿಚ್ಚಿಟ್ಟರು.

ಕಾಸರಗೋಡಿನ ಸೀಮಾ
ಕೇರಳದ ಕಾಸರಗೋಡಿನ ಸೀಮಾ ಹೆಗೆಡೆ ಸಂಸ್ಕೃತ ವಿಷಯದಲ್ಲಿ 13 ಚಿನ್ನದ ಪದಕ ಮತ್ತು 1 ನಗದು ಬಹುಮಾನ ಗಳಿಸಿದ್ದಾರೆ. ಕೃಷಿಕ ಕುಟುಂಬದಲ್ಲಿ ಜನಿಸಿದ ಈಕೆ ಭಗವದ್ಗೀತೆಯ ಹಾಡುಗಾರ್ತಿಯೂ ಹೌದು. ಶಿಕ್ಷಕಿಯಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಗುರಿ ಇದೆ ಎಂದು ಹೇಳಿದರು.

ಕುಣಿಗಲ್‌ ಕಾವ್ಯ
ಎಚ್‌.ಡಿ ಕೋಟೆಯ ಕುಣಿಗಲ್‌ ಗ್ರಾಮದ ಕೊಲಿ ಕೆಲಸಗಾರ ಚಿಕ್ಕನಾಯಕ-ದೇವಾಲಮ್ಮ ಪುತ್ರಿ ಸಿ.ಕಾವ್ಯ ಎಂ.ಎ ಕನ್ನಡದಲ್ಲಿ 11 ಪದಕ ಹಾಗೂ 5 ನಗದು ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

9 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

10 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

13 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago