ಮೈಸೂರು

ಮೈಸೂರು ವಿವಿ | ಪಿಎಚ್.ಡಿ ಪ್ರವೇಶಾತಿ ಫಲಿತಾಂಶ ರದ್ದುಗೊಳಿಸುವಂತೆ ದಸಂಸ ಮನವಿ

ಮೈಸೂರು: ಯುಜಿಸಿ ಮಾರ್ಗಸೂಚಿ ಉಲ್ಲಂಘಿಸಿ ಮೈಸೂರು ವಿವಿ ನಡೆಸಿರುವ 2024-25ರ ಪಿಎಚ್.ಡಿ. ಪ್ರವೇಶಾತಿ ಫಲಿತಾಂಶವನ್ನು ರದ್ದುಗೊಳಿಸಿ, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

ಈ ಸಂಬಂಧ ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಅವರು, ಮೈಸೂರು ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಸಚಿವರಿಗೆ ದೂರು ಸಲ್ಲಿಸಿದ್ದಾರೆ.

ಯುಜಿಸಿ ಮಾರ್ಗಸೂಚಿಯನ್ವಯ ಯಾವುದೇ ವಿಶ್ವವಿದ್ಯಾನಿಲಯ ಪಿಎಚ್.ಡಿ. ಪ್ರವೇಶಾತಿ ಪರೀಕ್ಷೆ ನಡೆಸಬೇಕಾದರೆ ವಿಷಯವಾರು ಮತ್ತು ಮೀಸಲಾತಿಯನ್ನು ಖಾಲಿಯಿರುವ ಸಂಶೋಧಕರ ಸ್ಥಾನಗಳ ಮಾಹಿತಿಯೊಂದಿಗೆ ರಾಷ್ಟ್ರಮಟ್ಟದ ಕನಿಷ್ಠ ಎರಡು ಪತ್ರಿಕೆಗಳಲ್ಲಿ ಪ್ರಕಟಣೆ ಹೊರಡಿಸಬೇಕು. ಅರ್ಜಿ ಪಡೆದ ನಂತರ ಪರೀಕ್ಷೆ ಪಠ್ಯಕ್ರಮ ಬಿಡುಗಡೆಗೊಳಿಸಬೇಕು. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಬಹು ಆಯ್ಕೆ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಓಎಂಆರ್ ಕಾರ್ಬನ್ ಪ್ರತಿ ನೀಡಬೇಕು. ಆ ಓಎಂಆರ್ ಪ್ರತಿಯನ್ನು ಡಿಜಿಟಲ್ ಮೌಲ್ಯಮಾಪನಕ್ಕೆ ಒಳಪಡಿಸಬೇಕು. ಪ್ರಶ್ನೆಗಳು ತಪ್ಪಿದ್ದಲ್ಲಿ ತಕರಾರು ಪಟ್ಟಿಯನ್ನು ಬಿಡುಗಡೆ ಮಾಡಿ ನಂತರ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸಬೇಕು. ಆ ನಂತರ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಸಂದರ್ಶನದ ಮೂಲಕ ಮಾರ್ಗದರ್ಶನಕ್ಕಾಗಿ ಆಯ್ಕೆ ಮಾಡಬೇಕು. ಆದರೆ, ಮೈಸೂರು ವಿವಿ ಯುಜಿಸಿಯ ಯಾವುದೇ ಮಾರ್ಗಸೂಚಿಯನ್ನು ಪಾಲಿಸದೇ ಸಂಪೂರ್ಣವಾಗಿ ಗಾಳಿಗೆ ತೂರಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಪರೀಕ್ಷಾ ಅಕ್ರಮದಿಂದ ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ರಾಜಕೀಯ ಪ್ರಭಾವಗಳು ನುಸುಳಲು ಅವಕಾಶ ಮಾಡಿಕೊಟ್ಟಂತಾಗುವುದಲ್ಲದೇ ನ್ಯಾಯಯುತವಾಗಿ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಇದರಿಂದ ಶೈಕ್ಷಣಿಕ ವಾತಾವರಣ ಹದಗೆಡುತ್ತದೆ.

ಆದ್ದರಿಂದ 2024-25ರ ಪಿಎಚ್.ಡಿ. ಪ್ರವೇಶಾತಿ ಫಲಿತಾಂಶವನ್ನು ರದ್ದುಗೊಳಿಸಿ, ಅವ್ಯವಹಾರಗಳಿಗೆ ಎಡೆ ಮಾಡಿರುವ ಪರೀಕ್ಷಾ ಕಾರ್ಯ ವಿಧಾನವನ್ನು ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಿರೀಕಾಟಿಯಲ್ಲಿ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣ ಸಂಬಂಧ ಮುಖಂಡರೊಂದಿಗೆ ಚರ್ಚೆ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…

31 mins ago

ರಾಮನಗರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಸಾವು

ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್‌…

1 hour ago

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

5 hours ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

5 hours ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

5 hours ago