ಮೈಸೂರು

ಮೈಸೂರು ವಿವಿ | ಪಿಎಚ್.ಡಿ ಪ್ರವೇಶಾತಿ ಫಲಿತಾಂಶ ರದ್ದುಗೊಳಿಸುವಂತೆ ದಸಂಸ ಮನವಿ

ಮೈಸೂರು: ಯುಜಿಸಿ ಮಾರ್ಗಸೂಚಿ ಉಲ್ಲಂಘಿಸಿ ಮೈಸೂರು ವಿವಿ ನಡೆಸಿರುವ 2024-25ರ ಪಿಎಚ್.ಡಿ. ಪ್ರವೇಶಾತಿ ಫಲಿತಾಂಶವನ್ನು ರದ್ದುಗೊಳಿಸಿ, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

ಈ ಸಂಬಂಧ ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಅವರು, ಮೈಸೂರು ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಸಚಿವರಿಗೆ ದೂರು ಸಲ್ಲಿಸಿದ್ದಾರೆ.

ಯುಜಿಸಿ ಮಾರ್ಗಸೂಚಿಯನ್ವಯ ಯಾವುದೇ ವಿಶ್ವವಿದ್ಯಾನಿಲಯ ಪಿಎಚ್.ಡಿ. ಪ್ರವೇಶಾತಿ ಪರೀಕ್ಷೆ ನಡೆಸಬೇಕಾದರೆ ವಿಷಯವಾರು ಮತ್ತು ಮೀಸಲಾತಿಯನ್ನು ಖಾಲಿಯಿರುವ ಸಂಶೋಧಕರ ಸ್ಥಾನಗಳ ಮಾಹಿತಿಯೊಂದಿಗೆ ರಾಷ್ಟ್ರಮಟ್ಟದ ಕನಿಷ್ಠ ಎರಡು ಪತ್ರಿಕೆಗಳಲ್ಲಿ ಪ್ರಕಟಣೆ ಹೊರಡಿಸಬೇಕು. ಅರ್ಜಿ ಪಡೆದ ನಂತರ ಪರೀಕ್ಷೆ ಪಠ್ಯಕ್ರಮ ಬಿಡುಗಡೆಗೊಳಿಸಬೇಕು. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಬಹು ಆಯ್ಕೆ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಓಎಂಆರ್ ಕಾರ್ಬನ್ ಪ್ರತಿ ನೀಡಬೇಕು. ಆ ಓಎಂಆರ್ ಪ್ರತಿಯನ್ನು ಡಿಜಿಟಲ್ ಮೌಲ್ಯಮಾಪನಕ್ಕೆ ಒಳಪಡಿಸಬೇಕು. ಪ್ರಶ್ನೆಗಳು ತಪ್ಪಿದ್ದಲ್ಲಿ ತಕರಾರು ಪಟ್ಟಿಯನ್ನು ಬಿಡುಗಡೆ ಮಾಡಿ ನಂತರ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸಬೇಕು. ಆ ನಂತರ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಸಂದರ್ಶನದ ಮೂಲಕ ಮಾರ್ಗದರ್ಶನಕ್ಕಾಗಿ ಆಯ್ಕೆ ಮಾಡಬೇಕು. ಆದರೆ, ಮೈಸೂರು ವಿವಿ ಯುಜಿಸಿಯ ಯಾವುದೇ ಮಾರ್ಗಸೂಚಿಯನ್ನು ಪಾಲಿಸದೇ ಸಂಪೂರ್ಣವಾಗಿ ಗಾಳಿಗೆ ತೂರಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಪರೀಕ್ಷಾ ಅಕ್ರಮದಿಂದ ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ರಾಜಕೀಯ ಪ್ರಭಾವಗಳು ನುಸುಳಲು ಅವಕಾಶ ಮಾಡಿಕೊಟ್ಟಂತಾಗುವುದಲ್ಲದೇ ನ್ಯಾಯಯುತವಾಗಿ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಇದರಿಂದ ಶೈಕ್ಷಣಿಕ ವಾತಾವರಣ ಹದಗೆಡುತ್ತದೆ.

ಆದ್ದರಿಂದ 2024-25ರ ಪಿಎಚ್.ಡಿ. ಪ್ರವೇಶಾತಿ ಫಲಿತಾಂಶವನ್ನು ರದ್ದುಗೊಳಿಸಿ, ಅವ್ಯವಹಾರಗಳಿಗೆ ಎಡೆ ಮಾಡಿರುವ ಪರೀಕ್ಷಾ ಕಾರ್ಯ ವಿಧಾನವನ್ನು ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

58 mins ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

2 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

2 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

7 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

10 hours ago