ಮೈಸೂರು

ಮೈಸೂರು ವಿವಿ ಬಜೆಟ್‌ಗೆ ತುರ್ತು ಸಭೆ ಕೋರಿ ರಾಜ್ಯಪಾಲರಿಗೆ ಪತ್ರ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 2025-26ರ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಬಜೆಟ್ ಅಂದಾಜುಗಳನ್ನು ಚರ್ಚಿಸಿ ಮತ್ತು ಅನುಮೋದಿಸಲು ಮಾ.31ರೊಳಗೆ ತುರ್ತು ಸಿಂಡಿಕೇಟ್ ಸಭೆ ಕರೆಯಲು ಸೂಚಿಸುವಂತೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ.

ಮೈಸೂರು ವಿವಿ ಸಿಂಡಿಕೇಟ್‌ಗೆ ರಾಜ್ಯಪಾಲರಿಂದ ನಾಮ ನಿರ್ದೇಶನಗೊಂಡಿರುವ ಸದಸ್ಯ ಡಾ.ಟಿ.ಆರ್. ಚಂದ್ರಶೇಖರ್ ಅವರು, ಈ ಬಗ್ಗೆ ಪತ್ರ ಬರೆದಿದ್ದು ಬಜೆಟ್ ಸಭೆ ಕರೆಯುವಂತೆ ಕುಲಸಚಿವರಿಗೆ ನಿರ್ದೇಶನ ನೀಡಿ ಎಂದು ಮನವಿ ಮಾಡಿದ್ದಾರೆ.

ಈ ಸಂಬಂಧ ಈಗಾಗಲೇ ಮೈವಿವಿ ಕುಲಸಚಿವರಿಗೆ ಪತ್ರ ಬರೆದು ಬಜೆಟ್ ಸಭೆ ಕರೆಯುವಂತೆ ವಿನಂತಿಸಿದ್ದೆ. ಆದರೆ, ಆ ಪತ್ರಕ್ಕೆ ಇದುವರೆವಿಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕಳೆದ ವರ್ಷವೂ ಇದೇ ರೀತಿ ಕಾನೂನು ಉಲ್ಲಂಘನೆಯಾಗಿತ್ತು ಎಂಬ ಅಂಶವನ್ನು ಸಹ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜತೆಗೆ ಕುಲಸಚಿವರಿಗೆ ಬರೆದಿರುವ ಪತ್ರದ ಪ್ರತಿಯನ್ನೂ ಲಗತ್ತಿಸಿದ್ದಾರೆ.

109 ವರ್ಷಗಳ ಇತಿಹಾಸವುಳ್ಳ ನಮ್ಮ ಹೆಮ್ಮೆಯ ಮೈಸೂರು ವಿವಿ ಸಿಂಡಿಕೇಟ್‌ನ ಜವಾಬ್ದಾರಿಯುತ ಸದಸ್ಯನಾಗಿ ನಿಯಮದ ಪ್ರಕಾರ, 2025-26ರ ಬಜೆಟ್ ಅಂದಾಜುಗಳನ್ನು ಮಾರ್ಚ್ 31, 2025ರ ಮೊದಲು ಸಿಂಡಿಕೇಟ್‌ನಲ್ಲಿ ತಯಾರಿಸಿ, ಮಂಡಿಸಿ ಮತ್ತು ಅನುಮೋದಿಸಬೇಕು ಎಂದು ನಾನು ಬಲವಾಗಿ ನಂಬುತ್ತೇನೆ. ಹಾಗೆಯೇ ಇದೇ ಭರವಸೆಯನ್ನು ಕಳೆದ ವರ್ಷದ ಆರ್ಥಿಕ ವರ್ಷದ ಆಯವ್ಯಯ ಅಂದಾಜುಗಳ ಅನುಮೋದನೆಯ ಸಭೆಯಲ್ಲಿ, ಮಾನ್ಯ ಹಣಕಾಸು ಅಧಿಕಾರಿಗಳು ಮತ್ತು ಕುಲಪತಿಗಳು ಹಾಗೂ ಕುಲಸಚಿವರು ಸಭೆಗೆ ಭರವಸೆ ನೀಡಿ, ಮುಂದಿನ 2025-26ರ ಬಜೆಟ್ ಅಂದಾಜುಗಳನ್ನು ಕಾನೂನು ಪ್ರಕಾರ ಫೆಬ್ರವರಿ-ಮಾರ್ಚ್ ತಿಂಗಳ ಅವಧಿಯಲ್ಲಿ ಮಂಜೂರಾತಿ ಪಡೆಯುವುದಾಗಿ ಸಭೆಗೆ ಭರವಸೆ ನೀಡಿದ ಕಾರಣ ಅಂದಿನ ಆಯವ್ಯಯವನ್ನು ಸಿಂಡಿಕೇಟ್ ಅನುಮೋದಿಸಿರುತ್ತದೆ ಎಂದು ತಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಒಂದು ವೇಳೆ ತಾವು ನಿಯಮದ ಪ್ರಕಾರ 2025-26ರ ಆರ್ಥಿಕ ವರ್ಷದ ಆಯವ್ಯವನ್ನು ಮಾ.31ರೊಳಗಾಗಿ ಅನುಮೋದಿಸದೆ, ಕಳೆದ ವರ್ಷದಂತೆ ಈ ಸಲವೂ ತಪ್ಪು ಮಾಡಿ, ತಡವಾಗಿ ಏಪ್ರಿಲ್ ತಿಂಗಳ ನಂತರ ಬಜೆಟ್ ಮಂಡಿಸಿದರೆ ಅದಕ್ಕೆ ನನ್ನ ಅಸಮ್ಮತಿ ಇದ್ದು, ಉಲ್ಲಂಘನೆ ಮತ್ತು ದೋಷಗಳನ್ನು, ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ದೂರು ನೀಡಲಾಗುವುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

29 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

1 hour ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

3 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

4 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

5 hours ago