ಮೈಸೂರು

ಮೈಸೂರು ವಿವಿ ಬಜೆಟ್‌ಗೆ ತುರ್ತು ಸಭೆ ಕೋರಿ ರಾಜ್ಯಪಾಲರಿಗೆ ಪತ್ರ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 2025-26ರ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಬಜೆಟ್ ಅಂದಾಜುಗಳನ್ನು ಚರ್ಚಿಸಿ ಮತ್ತು ಅನುಮೋದಿಸಲು ಮಾ.31ರೊಳಗೆ ತುರ್ತು ಸಿಂಡಿಕೇಟ್ ಸಭೆ ಕರೆಯಲು ಸೂಚಿಸುವಂತೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ.

ಮೈಸೂರು ವಿವಿ ಸಿಂಡಿಕೇಟ್‌ಗೆ ರಾಜ್ಯಪಾಲರಿಂದ ನಾಮ ನಿರ್ದೇಶನಗೊಂಡಿರುವ ಸದಸ್ಯ ಡಾ.ಟಿ.ಆರ್. ಚಂದ್ರಶೇಖರ್ ಅವರು, ಈ ಬಗ್ಗೆ ಪತ್ರ ಬರೆದಿದ್ದು ಬಜೆಟ್ ಸಭೆ ಕರೆಯುವಂತೆ ಕುಲಸಚಿವರಿಗೆ ನಿರ್ದೇಶನ ನೀಡಿ ಎಂದು ಮನವಿ ಮಾಡಿದ್ದಾರೆ.

ಈ ಸಂಬಂಧ ಈಗಾಗಲೇ ಮೈವಿವಿ ಕುಲಸಚಿವರಿಗೆ ಪತ್ರ ಬರೆದು ಬಜೆಟ್ ಸಭೆ ಕರೆಯುವಂತೆ ವಿನಂತಿಸಿದ್ದೆ. ಆದರೆ, ಆ ಪತ್ರಕ್ಕೆ ಇದುವರೆವಿಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕಳೆದ ವರ್ಷವೂ ಇದೇ ರೀತಿ ಕಾನೂನು ಉಲ್ಲಂಘನೆಯಾಗಿತ್ತು ಎಂಬ ಅಂಶವನ್ನು ಸಹ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜತೆಗೆ ಕುಲಸಚಿವರಿಗೆ ಬರೆದಿರುವ ಪತ್ರದ ಪ್ರತಿಯನ್ನೂ ಲಗತ್ತಿಸಿದ್ದಾರೆ.

109 ವರ್ಷಗಳ ಇತಿಹಾಸವುಳ್ಳ ನಮ್ಮ ಹೆಮ್ಮೆಯ ಮೈಸೂರು ವಿವಿ ಸಿಂಡಿಕೇಟ್‌ನ ಜವಾಬ್ದಾರಿಯುತ ಸದಸ್ಯನಾಗಿ ನಿಯಮದ ಪ್ರಕಾರ, 2025-26ರ ಬಜೆಟ್ ಅಂದಾಜುಗಳನ್ನು ಮಾರ್ಚ್ 31, 2025ರ ಮೊದಲು ಸಿಂಡಿಕೇಟ್‌ನಲ್ಲಿ ತಯಾರಿಸಿ, ಮಂಡಿಸಿ ಮತ್ತು ಅನುಮೋದಿಸಬೇಕು ಎಂದು ನಾನು ಬಲವಾಗಿ ನಂಬುತ್ತೇನೆ. ಹಾಗೆಯೇ ಇದೇ ಭರವಸೆಯನ್ನು ಕಳೆದ ವರ್ಷದ ಆರ್ಥಿಕ ವರ್ಷದ ಆಯವ್ಯಯ ಅಂದಾಜುಗಳ ಅನುಮೋದನೆಯ ಸಭೆಯಲ್ಲಿ, ಮಾನ್ಯ ಹಣಕಾಸು ಅಧಿಕಾರಿಗಳು ಮತ್ತು ಕುಲಪತಿಗಳು ಹಾಗೂ ಕುಲಸಚಿವರು ಸಭೆಗೆ ಭರವಸೆ ನೀಡಿ, ಮುಂದಿನ 2025-26ರ ಬಜೆಟ್ ಅಂದಾಜುಗಳನ್ನು ಕಾನೂನು ಪ್ರಕಾರ ಫೆಬ್ರವರಿ-ಮಾರ್ಚ್ ತಿಂಗಳ ಅವಧಿಯಲ್ಲಿ ಮಂಜೂರಾತಿ ಪಡೆಯುವುದಾಗಿ ಸಭೆಗೆ ಭರವಸೆ ನೀಡಿದ ಕಾರಣ ಅಂದಿನ ಆಯವ್ಯಯವನ್ನು ಸಿಂಡಿಕೇಟ್ ಅನುಮೋದಿಸಿರುತ್ತದೆ ಎಂದು ತಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಒಂದು ವೇಳೆ ತಾವು ನಿಯಮದ ಪ್ರಕಾರ 2025-26ರ ಆರ್ಥಿಕ ವರ್ಷದ ಆಯವ್ಯವನ್ನು ಮಾ.31ರೊಳಗಾಗಿ ಅನುಮೋದಿಸದೆ, ಕಳೆದ ವರ್ಷದಂತೆ ಈ ಸಲವೂ ತಪ್ಪು ಮಾಡಿ, ತಡವಾಗಿ ಏಪ್ರಿಲ್ ತಿಂಗಳ ನಂತರ ಬಜೆಟ್ ಮಂಡಿಸಿದರೆ ಅದಕ್ಕೆ ನನ್ನ ಅಸಮ್ಮತಿ ಇದ್ದು, ಉಲ್ಲಂಘನೆ ಮತ್ತು ದೋಷಗಳನ್ನು, ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ದೂರು ನೀಡಲಾಗುವುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 mins ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

36 mins ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

2 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

2 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

8 hours ago