ಮೈಸೂರು

ಮೈಸೂರು ವಿವಿ ಬಜೆಟ್‌ಗೆ ತುರ್ತು ಸಭೆ ಕೋರಿ ರಾಜ್ಯಪಾಲರಿಗೆ ಪತ್ರ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 2025-26ರ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಬಜೆಟ್ ಅಂದಾಜುಗಳನ್ನು ಚರ್ಚಿಸಿ ಮತ್ತು ಅನುಮೋದಿಸಲು ಮಾ.31ರೊಳಗೆ ತುರ್ತು ಸಿಂಡಿಕೇಟ್ ಸಭೆ ಕರೆಯಲು ಸೂಚಿಸುವಂತೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ.

ಮೈಸೂರು ವಿವಿ ಸಿಂಡಿಕೇಟ್‌ಗೆ ರಾಜ್ಯಪಾಲರಿಂದ ನಾಮ ನಿರ್ದೇಶನಗೊಂಡಿರುವ ಸದಸ್ಯ ಡಾ.ಟಿ.ಆರ್. ಚಂದ್ರಶೇಖರ್ ಅವರು, ಈ ಬಗ್ಗೆ ಪತ್ರ ಬರೆದಿದ್ದು ಬಜೆಟ್ ಸಭೆ ಕರೆಯುವಂತೆ ಕುಲಸಚಿವರಿಗೆ ನಿರ್ದೇಶನ ನೀಡಿ ಎಂದು ಮನವಿ ಮಾಡಿದ್ದಾರೆ.

ಈ ಸಂಬಂಧ ಈಗಾಗಲೇ ಮೈವಿವಿ ಕುಲಸಚಿವರಿಗೆ ಪತ್ರ ಬರೆದು ಬಜೆಟ್ ಸಭೆ ಕರೆಯುವಂತೆ ವಿನಂತಿಸಿದ್ದೆ. ಆದರೆ, ಆ ಪತ್ರಕ್ಕೆ ಇದುವರೆವಿಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕಳೆದ ವರ್ಷವೂ ಇದೇ ರೀತಿ ಕಾನೂನು ಉಲ್ಲಂಘನೆಯಾಗಿತ್ತು ಎಂಬ ಅಂಶವನ್ನು ಸಹ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜತೆಗೆ ಕುಲಸಚಿವರಿಗೆ ಬರೆದಿರುವ ಪತ್ರದ ಪ್ರತಿಯನ್ನೂ ಲಗತ್ತಿಸಿದ್ದಾರೆ.

109 ವರ್ಷಗಳ ಇತಿಹಾಸವುಳ್ಳ ನಮ್ಮ ಹೆಮ್ಮೆಯ ಮೈಸೂರು ವಿವಿ ಸಿಂಡಿಕೇಟ್‌ನ ಜವಾಬ್ದಾರಿಯುತ ಸದಸ್ಯನಾಗಿ ನಿಯಮದ ಪ್ರಕಾರ, 2025-26ರ ಬಜೆಟ್ ಅಂದಾಜುಗಳನ್ನು ಮಾರ್ಚ್ 31, 2025ರ ಮೊದಲು ಸಿಂಡಿಕೇಟ್‌ನಲ್ಲಿ ತಯಾರಿಸಿ, ಮಂಡಿಸಿ ಮತ್ತು ಅನುಮೋದಿಸಬೇಕು ಎಂದು ನಾನು ಬಲವಾಗಿ ನಂಬುತ್ತೇನೆ. ಹಾಗೆಯೇ ಇದೇ ಭರವಸೆಯನ್ನು ಕಳೆದ ವರ್ಷದ ಆರ್ಥಿಕ ವರ್ಷದ ಆಯವ್ಯಯ ಅಂದಾಜುಗಳ ಅನುಮೋದನೆಯ ಸಭೆಯಲ್ಲಿ, ಮಾನ್ಯ ಹಣಕಾಸು ಅಧಿಕಾರಿಗಳು ಮತ್ತು ಕುಲಪತಿಗಳು ಹಾಗೂ ಕುಲಸಚಿವರು ಸಭೆಗೆ ಭರವಸೆ ನೀಡಿ, ಮುಂದಿನ 2025-26ರ ಬಜೆಟ್ ಅಂದಾಜುಗಳನ್ನು ಕಾನೂನು ಪ್ರಕಾರ ಫೆಬ್ರವರಿ-ಮಾರ್ಚ್ ತಿಂಗಳ ಅವಧಿಯಲ್ಲಿ ಮಂಜೂರಾತಿ ಪಡೆಯುವುದಾಗಿ ಸಭೆಗೆ ಭರವಸೆ ನೀಡಿದ ಕಾರಣ ಅಂದಿನ ಆಯವ್ಯಯವನ್ನು ಸಿಂಡಿಕೇಟ್ ಅನುಮೋದಿಸಿರುತ್ತದೆ ಎಂದು ತಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಒಂದು ವೇಳೆ ತಾವು ನಿಯಮದ ಪ್ರಕಾರ 2025-26ರ ಆರ್ಥಿಕ ವರ್ಷದ ಆಯವ್ಯವನ್ನು ಮಾ.31ರೊಳಗಾಗಿ ಅನುಮೋದಿಸದೆ, ಕಳೆದ ವರ್ಷದಂತೆ ಈ ಸಲವೂ ತಪ್ಪು ಮಾಡಿ, ತಡವಾಗಿ ಏಪ್ರಿಲ್ ತಿಂಗಳ ನಂತರ ಬಜೆಟ್ ಮಂಡಿಸಿದರೆ ಅದಕ್ಕೆ ನನ್ನ ಅಸಮ್ಮತಿ ಇದ್ದು, ಉಲ್ಲಂಘನೆ ಮತ್ತು ದೋಷಗಳನ್ನು, ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ದೂರು ನೀಡಲಾಗುವುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

8 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

9 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

10 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

11 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

11 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

12 hours ago