ಮೈಸೂರು

ಮೈಸೂರು ವಿವಿ-ಕ್ಲಿಕ್ಸ್ ಕ್ಯಾಂಪಸ್ ಒಡಂಬಡಿಕೆ

ಕ್ಲಿಕ್ಸ್ ಕ್ಯಾಂಪಸ್‌ನ ಸಹಯೋಗದೊಂದಿಗೆ ವಿವಿ ವಿದ್ಯಾರ್ಥಿಗಳಿಗೆ ದೊರೆಯಲಿದೆ ಅನೇಕ ತರಬೇತಿ

ಮೈಸೂರು: ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಮೈಸೂರು ವಿಶ್ವವಿದ್ಯಾನಿಲಯ  ಮತ್ತು ಕ್ಲಿಕ್ಸ್ ಕ್ಯಾಂಪಸ್ ಒಡಂಬಡಿಕೆ ಕಾರ್ಯಕ್ರಮದಲ್ಲಿ ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕೆರಿಯರ್  ಹಬ್‌ನ ನಿರ್ದೇಶಕ ಪ್ರೊ.ಹಂಸವೇಣಿ ಮತ್ತು ಕ್ಲಿಕ್ಸ್ ಕ್ಯಾಂಪಸ್‌ನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಎಂ.ಟಿ.ಅರಸು ಅವರು ಒಪ್ಪಂದದ ಪತ್ರಗಳಿಗೆ ಸಹಿ ಹಾಕಿದರು.

ನಂತರ ಮಾತನಾಡಿದ ಪ್ರೊ.ಜಿ.ಹೇಮಂತ್ ಕುಮಾರ್, ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಬೆಂಗಳೂರು ಮೂಲದ ಶಿಕ್ಷಣ ತಂತ್ರಜ್ಞಾನ ಸಂಸ್ಥೆಯಾದ  ಕ್ಲಿಕ್ಸ್ ಕ್ಯಾಂಪಸ್‌ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಸಹಯೋಗದಿಂದ ಬೆಂಗಳೂರಿನ ಡಾ.ಸಂತೋಷ್ ಕೋಶಿ ಅವರ ನೇತೃತ್ವದ ಕೊಶೀಸ್ ಸಮೂಹ ಸಂಸ್ಥೆಗಳ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮಗಳಡಿ ವಿವಿ ವಿದ್ಯಾರ್ಥಿಗಳಿಗೆ ಅನೇಕ ತರಬೇತಿ ಕಾರ್ಯಕ್ರಮಗಳು ಉಚಿತವಾಗಿ ದೊರೆಯಲಿದೆ. ಅಲ್ಲದೇ, ರಾಜ್ಯದ ವಿವಿಗಳ ಪೈಕಿ, ಮೈಸೂರು ವಿವಿ ಈ ಒಡಂಬಡಿಕೆಗೆ ಒಳಪಟ್ಟಿರುವ ಪ್ರಥಮ ವಿಶ್ವವಿದ್ಯಾನಿಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕ್ಲಿಕ್ಸ್ ಕ್ಯಾಂಪಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಟಿ.ಅರಸು ಮಾತನಾಡಿ, ವಿದ್ಯಾರ್ಥಿಗಳು ಈ ಕೋರ್ಸ್ ಕಲಿಯುವುದರಿಂದ ಸರ್ಕಾರದ ವಿವಿಧ ಹುದ್ದೆಗಳ ಸ್ಪರ್ಧಾತ್ಮ ಕ ಪರೀಕ್ಷೆಗಳನ್ನು ಮತ್ತು ವಿವಿಧ ಬ್ಯಾಂಕಿಂಗ್ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಮತ್ತು ಖಾಸಗಿ ಕಂಪೆನಿಗಳಲ್ಲಿ ಉದ್ಯೋಗ ಪಡೆಯಲು ಬೇಕಿರುವ ಮೆಂಟಲ್ ಎಬಿಲಿಟಿ, , ಸ್ಕಿಲ್ಸ್, ಗ್ರೂಪ್ ಡಿಸ್ಕಶನ್, ಸಂದರ್ಶನ ಪ್ರಕ್ರಿಯೆ‌  ರೆಸ್ಯೂಮ್ ಬರೆಯುವ  ಕೌಶಲ್ಯ ಸೇರಿದಂತೆ ಸುಮಾರು ೨೦೦ಕ್ಕೂ ಹೆಚ್ಚು ಗಂಟೆಗಳ ವಿಡಿಯೋಗಳನ್ನು ವೀಕ್ಷಿಸಬಹುದಾಗಿದೆ. ಸರ್ಕಾರದ ವಿವಿಧ ಹುದ್ದೆಗಳಿಗಾಗಿ ಪ್ರಯತ್ನಿಸುವ ವಿದ್ಯಾರ್ಥಿಗಳಿಗೆ ಅನುಕೂಲಮಾಡುವ ದೃಷ್ಟಿಯಿಂದ ಕನ್ನಡದಲ್ಲಿಯೂ ಹೊಸ ಕೋರ್ಸ್‌ಗಳು ಪ್ರತಿ ವಾರ ದೊರೆಯುವಂತೆ ಮಾಡಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಕ್ಲಿಕ್ಸ್ ಕ್ಯಾಂಪಸ್‌ನ ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಉಚಿತವಾಗಿ ಸೈನ್ ಆ್ಯಪ್ ಮಾಡಿಕೊಳ್ಳಬಹುದು. ವಿವಿಧ ಆ್ಯಪ್ ಹಾಗೂ ಕೋರ್ಸ್‌ಗಳನ್ನು ಉಚಿತವಾಗಿ ಕಲಿಯಬಹುದು. ಈ ಆನ್‌ಲೈನ್ ಕೋರ್ಸ್ ದಿನದ ೨೪ ಗಂಟೆಗಳೂ ಲಭ್ಯವಿದ್ದು, ವಿದ್ಯಾರ್ಥಿಗಳು ತಮಗೆ ಬೇಕಾದ ಸಮಯದಲ್ಲಿ ಕಲಿಯಲು ಅವಕಾಶ ಕಲ್ಪಿಸಲಾಗಿದೆ.

 

-ಎಂ.ಟಿ.ಅರಸು, ಕ್ಲಿಕ್ಸ್ ಕ್ಯಾಂಪಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ

 

 

 

andolana

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

6 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

7 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

7 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

7 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

7 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

8 hours ago