ಮೈಸೂರು

ಮೈಸೂರು ವಿವಿ-ಕ್ಲಿಕ್ಸ್ ಕ್ಯಾಂಪಸ್ ಒಡಂಬಡಿಕೆ

ಕ್ಲಿಕ್ಸ್ ಕ್ಯಾಂಪಸ್‌ನ ಸಹಯೋಗದೊಂದಿಗೆ ವಿವಿ ವಿದ್ಯಾರ್ಥಿಗಳಿಗೆ ದೊರೆಯಲಿದೆ ಅನೇಕ ತರಬೇತಿ

ಮೈಸೂರು: ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಮೈಸೂರು ವಿಶ್ವವಿದ್ಯಾನಿಲಯ  ಮತ್ತು ಕ್ಲಿಕ್ಸ್ ಕ್ಯಾಂಪಸ್ ಒಡಂಬಡಿಕೆ ಕಾರ್ಯಕ್ರಮದಲ್ಲಿ ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕೆರಿಯರ್  ಹಬ್‌ನ ನಿರ್ದೇಶಕ ಪ್ರೊ.ಹಂಸವೇಣಿ ಮತ್ತು ಕ್ಲಿಕ್ಸ್ ಕ್ಯಾಂಪಸ್‌ನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಎಂ.ಟಿ.ಅರಸು ಅವರು ಒಪ್ಪಂದದ ಪತ್ರಗಳಿಗೆ ಸಹಿ ಹಾಕಿದರು.

ನಂತರ ಮಾತನಾಡಿದ ಪ್ರೊ.ಜಿ.ಹೇಮಂತ್ ಕುಮಾರ್, ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಬೆಂಗಳೂರು ಮೂಲದ ಶಿಕ್ಷಣ ತಂತ್ರಜ್ಞಾನ ಸಂಸ್ಥೆಯಾದ  ಕ್ಲಿಕ್ಸ್ ಕ್ಯಾಂಪಸ್‌ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಸಹಯೋಗದಿಂದ ಬೆಂಗಳೂರಿನ ಡಾ.ಸಂತೋಷ್ ಕೋಶಿ ಅವರ ನೇತೃತ್ವದ ಕೊಶೀಸ್ ಸಮೂಹ ಸಂಸ್ಥೆಗಳ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮಗಳಡಿ ವಿವಿ ವಿದ್ಯಾರ್ಥಿಗಳಿಗೆ ಅನೇಕ ತರಬೇತಿ ಕಾರ್ಯಕ್ರಮಗಳು ಉಚಿತವಾಗಿ ದೊರೆಯಲಿದೆ. ಅಲ್ಲದೇ, ರಾಜ್ಯದ ವಿವಿಗಳ ಪೈಕಿ, ಮೈಸೂರು ವಿವಿ ಈ ಒಡಂಬಡಿಕೆಗೆ ಒಳಪಟ್ಟಿರುವ ಪ್ರಥಮ ವಿಶ್ವವಿದ್ಯಾನಿಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕ್ಲಿಕ್ಸ್ ಕ್ಯಾಂಪಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಟಿ.ಅರಸು ಮಾತನಾಡಿ, ವಿದ್ಯಾರ್ಥಿಗಳು ಈ ಕೋರ್ಸ್ ಕಲಿಯುವುದರಿಂದ ಸರ್ಕಾರದ ವಿವಿಧ ಹುದ್ದೆಗಳ ಸ್ಪರ್ಧಾತ್ಮ ಕ ಪರೀಕ್ಷೆಗಳನ್ನು ಮತ್ತು ವಿವಿಧ ಬ್ಯಾಂಕಿಂಗ್ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಮತ್ತು ಖಾಸಗಿ ಕಂಪೆನಿಗಳಲ್ಲಿ ಉದ್ಯೋಗ ಪಡೆಯಲು ಬೇಕಿರುವ ಮೆಂಟಲ್ ಎಬಿಲಿಟಿ, , ಸ್ಕಿಲ್ಸ್, ಗ್ರೂಪ್ ಡಿಸ್ಕಶನ್, ಸಂದರ್ಶನ ಪ್ರಕ್ರಿಯೆ‌  ರೆಸ್ಯೂಮ್ ಬರೆಯುವ  ಕೌಶಲ್ಯ ಸೇರಿದಂತೆ ಸುಮಾರು ೨೦೦ಕ್ಕೂ ಹೆಚ್ಚು ಗಂಟೆಗಳ ವಿಡಿಯೋಗಳನ್ನು ವೀಕ್ಷಿಸಬಹುದಾಗಿದೆ. ಸರ್ಕಾರದ ವಿವಿಧ ಹುದ್ದೆಗಳಿಗಾಗಿ ಪ್ರಯತ್ನಿಸುವ ವಿದ್ಯಾರ್ಥಿಗಳಿಗೆ ಅನುಕೂಲಮಾಡುವ ದೃಷ್ಟಿಯಿಂದ ಕನ್ನಡದಲ್ಲಿಯೂ ಹೊಸ ಕೋರ್ಸ್‌ಗಳು ಪ್ರತಿ ವಾರ ದೊರೆಯುವಂತೆ ಮಾಡಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಕ್ಲಿಕ್ಸ್ ಕ್ಯಾಂಪಸ್‌ನ ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಉಚಿತವಾಗಿ ಸೈನ್ ಆ್ಯಪ್ ಮಾಡಿಕೊಳ್ಳಬಹುದು. ವಿವಿಧ ಆ್ಯಪ್ ಹಾಗೂ ಕೋರ್ಸ್‌ಗಳನ್ನು ಉಚಿತವಾಗಿ ಕಲಿಯಬಹುದು. ಈ ಆನ್‌ಲೈನ್ ಕೋರ್ಸ್ ದಿನದ ೨೪ ಗಂಟೆಗಳೂ ಲಭ್ಯವಿದ್ದು, ವಿದ್ಯಾರ್ಥಿಗಳು ತಮಗೆ ಬೇಕಾದ ಸಮಯದಲ್ಲಿ ಕಲಿಯಲು ಅವಕಾಶ ಕಲ್ಪಿಸಲಾಗಿದೆ.

 

-ಎಂ.ಟಿ.ಅರಸು, ಕ್ಲಿಕ್ಸ್ ಕ್ಯಾಂಪಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ

 

 

 

andolana

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

2 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

2 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

3 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

5 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

5 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

5 hours ago