ಮೈಸೂರು:ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ, ನಿರ್ದೇಶಕರೂ ಆಗಿದ್ದ ಪ್ರೊ.ವಿ.ಕೆ. ನಟರಾಜ್ (85) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ನಿವೃತ್ತಿ ನಂತರ ಚೆನ್ನೈನ ಮದ್ರಾಸ್ ಇನ್ಸ್ಟಿಟ್ಯೂಟ್ ಆಫ್ ಡೆವಲಪ್ಮೆಂಟ್ ಸ್ಟಡೀಸ್ (MIDS) ನ ನಿರ್ದೇಶಕರಾಗಿದ್ದರು. ಬಳಿಕ ಇಂಡೊ-ಕೆನೆಡಿಯನ್ ಸ್ಟಡಿ ಸೆಂಟರ್ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.
ಅಭಿವೃದ್ದಿ ಅರ್ಥಶಾಸ್ತ್ರದಲ್ಲಿ ಪರಿಣಿತಿ ಹೊಂದಿದ್ದು, ಮೂರು ದಶಕಗಳ ಕಾಲ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತಮ್ಮ ಅಧ್ಯಾಪಕ ಜೀವನವನ್ನು ನಡೆಸಿದ್ದಾರೆ. ನಂತರ ಅಭಿವೃದ್ದಿ ಅಧ್ಯಯನ ವಿಭಾಗದ ಮುಖ್ಯಸ್ಥರು ಆಗಿದ್ದರು.
ಅರ್ಥಶಾಸ್ತ್ರ ಕುರಿತು ಇಂಗ್ಲಿಷ್ ಪತ್ರಿಕೆಗಳಿಗೆ ಲೇಖನ ಬರೆಯುತ್ತಿದ್ದರು. ವರ್ಲ್ಡ್ ಬ್ಯಾಂಕಿನ ಸಲಹೆಗಾರರಾಗಿದ್ದ ಇವರು ಖ್ಯಾತ ಸರೋಜ ವಾದಕ ಪಂ. ತಾರಾನಾಥರ ಆತ್ಮೀಯರೂ ಆಗಿದ್ದರು.
ಸಂಬಂಧಿಕರು, ಹಿತೈಷಿಗಳು, ಸ್ನೇಹಿತರು ಅಂತಿಮ ನಮನ ಸಲ್ಲಿಸಲು ಮಂಗಳವಾರ (ಡಿ.10) ಬೆಳಿಗ್ಗೆ ಅವರ ನಿವಾಸದಲ್ಲಿ ಇರಿಸಲಾಗುವುದು. ನಂತರ ಬೆಳಿಗ್ಗೆ 11ಕ್ಕೆ ಜೆಎಸ್ಎಸ್ ಅಸ್ಪತ್ರೆಗೆ ದಾನವಾಗಿ ನೀಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…
ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…
ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ. ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…