ಮೈಸೂರು

ಮೈಸೂರು ವಿ.ವಿ ನಿವೃತ್ತ ಪ್ರಾದ್ಯಾಪಕ ವಿ.ಕೆ. ನಟರಾಜ್‌ ನಿಧನ

ಮೈಸೂರು:ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ, ನಿರ್ದೇಶಕರೂ ಆಗಿದ್ದ ಪ್ರೊ.ವಿ.ಕೆ. ನಟರಾಜ್‌ (85) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ನಿವೃತ್ತಿ ನಂತರ ಚೆನ್ನೈನ ಮದ್ರಾಸ್‌ ಇನ್ಸ್‌ಟಿಟ್ಯೂಟ್‌ ಆಫ್‌ ಡೆವಲಪ್‌ಮೆಂಟ್‌ ಸ್ಟಡೀಸ್‌ (MIDS) ನ ನಿರ್ದೇಶಕರಾಗಿದ್ದರು. ಬಳಿಕ ಇಂಡೊ-ಕೆನೆಡಿಯನ್‌ ಸ್ಟಡಿ ಸೆಂಟರ್ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.

ಅಭಿವೃದ್ದಿ ಅರ್ಥಶಾಸ್ತ್ರದಲ್ಲಿ ಪರಿಣಿತಿ ಹೊಂದಿದ್ದು, ಮೂರು ದಶಕಗಳ ಕಾಲ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತಮ್ಮ ಅಧ್ಯಾಪಕ ಜೀವನವನ್ನು ನಡೆಸಿದ್ದಾರೆ. ನಂತರ ಅಭಿವೃದ್ದಿ ಅಧ್ಯಯನ ವಿಭಾಗದ ಮುಖ್ಯಸ್ಥರು ಆಗಿದ್ದರು.

ಅರ್ಥಶಾಸ್ತ್ರ ಕುರಿತು ಇಂಗ್ಲಿಷ್‌ ಪತ್ರಿಕೆಗಳಿಗೆ ಲೇಖನ ಬರೆಯುತ್ತಿದ್ದರು. ವರ್ಲ್ಡ್‌ ಬ್ಯಾಂಕಿನ ಸಲಹೆಗಾರರಾಗಿದ್ದ ಇವರು ಖ್ಯಾತ ಸರೋಜ ವಾದಕ ಪಂ. ತಾರಾನಾಥರ ಆತ್ಮೀಯರೂ ಆಗಿದ್ದರು.

ಸಂಬಂಧಿಕರು, ಹಿತೈಷಿಗಳು, ಸ್ನೇಹಿತರು ಅಂತಿಮ ನಮನ ಸಲ್ಲಿಸಲು ಮಂಗಳವಾರ (ಡಿ.10) ಬೆಳಿಗ್ಗೆ ಅವರ ನಿವಾಸದಲ್ಲಿ ಇರಿಸಲಾಗುವುದು. ನಂತರ ಬೆಳಿಗ್ಗೆ 11ಕ್ಕೆ ಜೆಎಸ್‌ಎಸ್‌ ಅಸ್ಪತ್ರೆಗೆ ದಾನವಾಗಿ ನೀಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

4 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

4 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

4 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

4 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

4 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

5 hours ago