ಮೈಸೂರು:ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ, ನಿರ್ದೇಶಕರೂ ಆಗಿದ್ದ ಪ್ರೊ.ವಿ.ಕೆ. ನಟರಾಜ್ (85) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ನಿವೃತ್ತಿ ನಂತರ ಚೆನ್ನೈನ ಮದ್ರಾಸ್ ಇನ್ಸ್ಟಿಟ್ಯೂಟ್ ಆಫ್ ಡೆವಲಪ್ಮೆಂಟ್ ಸ್ಟಡೀಸ್ (MIDS) ನ ನಿರ್ದೇಶಕರಾಗಿದ್ದರು. ಬಳಿಕ ಇಂಡೊ-ಕೆನೆಡಿಯನ್ ಸ್ಟಡಿ ಸೆಂಟರ್ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.
ಅಭಿವೃದ್ದಿ ಅರ್ಥಶಾಸ್ತ್ರದಲ್ಲಿ ಪರಿಣಿತಿ ಹೊಂದಿದ್ದು, ಮೂರು ದಶಕಗಳ ಕಾಲ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತಮ್ಮ ಅಧ್ಯಾಪಕ ಜೀವನವನ್ನು ನಡೆಸಿದ್ದಾರೆ. ನಂತರ ಅಭಿವೃದ್ದಿ ಅಧ್ಯಯನ ವಿಭಾಗದ ಮುಖ್ಯಸ್ಥರು ಆಗಿದ್ದರು.
ಅರ್ಥಶಾಸ್ತ್ರ ಕುರಿತು ಇಂಗ್ಲಿಷ್ ಪತ್ರಿಕೆಗಳಿಗೆ ಲೇಖನ ಬರೆಯುತ್ತಿದ್ದರು. ವರ್ಲ್ಡ್ ಬ್ಯಾಂಕಿನ ಸಲಹೆಗಾರರಾಗಿದ್ದ ಇವರು ಖ್ಯಾತ ಸರೋಜ ವಾದಕ ಪಂ. ತಾರಾನಾಥರ ಆತ್ಮೀಯರೂ ಆಗಿದ್ದರು.
ಸಂಬಂಧಿಕರು, ಹಿತೈಷಿಗಳು, ಸ್ನೇಹಿತರು ಅಂತಿಮ ನಮನ ಸಲ್ಲಿಸಲು ಮಂಗಳವಾರ (ಡಿ.10) ಬೆಳಿಗ್ಗೆ ಅವರ ನಿವಾಸದಲ್ಲಿ ಇರಿಸಲಾಗುವುದು. ನಂತರ ಬೆಳಿಗ್ಗೆ 11ಕ್ಕೆ ಜೆಎಸ್ಎಸ್ ಅಸ್ಪತ್ರೆಗೆ ದಾನವಾಗಿ ನೀಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…