ಮೈಸೂರು:ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ, ನಿರ್ದೇಶಕರೂ ಆಗಿದ್ದ ಪ್ರೊ.ವಿ.ಕೆ. ನಟರಾಜ್ (85) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ನಿವೃತ್ತಿ ನಂತರ ಚೆನ್ನೈನ ಮದ್ರಾಸ್ ಇನ್ಸ್ಟಿಟ್ಯೂಟ್ ಆಫ್ ಡೆವಲಪ್ಮೆಂಟ್ ಸ್ಟಡೀಸ್ (MIDS) ನ ನಿರ್ದೇಶಕರಾಗಿದ್ದರು. ಬಳಿಕ ಇಂಡೊ-ಕೆನೆಡಿಯನ್ ಸ್ಟಡಿ ಸೆಂಟರ್ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.
ಅಭಿವೃದ್ದಿ ಅರ್ಥಶಾಸ್ತ್ರದಲ್ಲಿ ಪರಿಣಿತಿ ಹೊಂದಿದ್ದು, ಮೂರು ದಶಕಗಳ ಕಾಲ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತಮ್ಮ ಅಧ್ಯಾಪಕ ಜೀವನವನ್ನು ನಡೆಸಿದ್ದಾರೆ. ನಂತರ ಅಭಿವೃದ್ದಿ ಅಧ್ಯಯನ ವಿಭಾಗದ ಮುಖ್ಯಸ್ಥರು ಆಗಿದ್ದರು.
ಅರ್ಥಶಾಸ್ತ್ರ ಕುರಿತು ಇಂಗ್ಲಿಷ್ ಪತ್ರಿಕೆಗಳಿಗೆ ಲೇಖನ ಬರೆಯುತ್ತಿದ್ದರು. ವರ್ಲ್ಡ್ ಬ್ಯಾಂಕಿನ ಸಲಹೆಗಾರರಾಗಿದ್ದ ಇವರು ಖ್ಯಾತ ಸರೋಜ ವಾದಕ ಪಂ. ತಾರಾನಾಥರ ಆತ್ಮೀಯರೂ ಆಗಿದ್ದರು.
ಸಂಬಂಧಿಕರು, ಹಿತೈಷಿಗಳು, ಸ್ನೇಹಿತರು ಅಂತಿಮ ನಮನ ಸಲ್ಲಿಸಲು ಮಂಗಳವಾರ (ಡಿ.10) ಬೆಳಿಗ್ಗೆ ಅವರ ನಿವಾಸದಲ್ಲಿ ಇರಿಸಲಾಗುವುದು. ನಂತರ ಬೆಳಿಗ್ಗೆ 11ಕ್ಕೆ ಜೆಎಸ್ಎಸ್ ಅಸ್ಪತ್ರೆಗೆ ದಾನವಾಗಿ ನೀಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…