ಮೈಸೂರು

ಮಹಾರಾಜ ಟ್ರೋಫಿಗೆ ಮೈಸೂರು ವಾರಿಯರ್ಸ್‌ ಸಿದ್ದ…

ಮೈಸೂರು : ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಆ.10ರಿಂದ 27ರವರೆಗೆ ನಡೆಯುವ ಮಹಾರಾಜ ಟ್ರೋಫಿಗೆ ಮೈಸೂರು ವಾರಿಯರ್ಸ್ ತಂಡ ಸಜ್ಜಾಗಿದ್ದು, ತಂಡದ ಆಟಗಾರರನ್ನು ಅನಾವರಣಗೊಳಿಸಲಾಯಿತು.

ಎನ್.ಆರ್ ಗ್ರೂಪ್ ಮಾಲೀಕತ್ವದ ಹಾಲಿ ಚಾಂಪಿಯನ್ ಮೈಸೂರು ವಾರಿಯರ್ಸ್ ಅನುಭವಿ ಹಾಗೂ ಯುವ ಪ್ರತಿಭಾವಂತ ಆಟಗಾರರಿಂದ ಕೂಡಿದ್ದು, ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಂಡದ ಆಟಗಾರರನ್ನು ಪರಿಚಯಿಸಲಾಯಿತು.

ತಂಡ: ಮನೀಶ್ ಪಾಂಡೆ(ನಾಯಕ), ಕರುಣ್ ನಾಯರ್, ಪ್ರಸಿದ್ದ್ ಕೃಷ್ಣ, ಕೃಷ್ಣಪ್ಪ ಗೌತಮ್, ಎಂ.ಆರ್. ಜಯಂತ್, ಗೌತಮ್ ಸಾಗರ್, ಎಸ್.ಎಂ.ಸಮಂತ್, ಕೆ.ಎಸ್.ಲಂಕೇಶ್, ಶಿಖರ್ ಶೆಟ್ಟಿ, ಎಲ್.ಆರ್. ಕುಮಾರ್, ಗೌತಮ್ ಮಿಶ್ರಾ, ಎಸ್.ಯು.ಕಾರ್ತಿಕ್, ಹರ್ಷಿಲ್ ಧರ್ಮಾನಿ, ಕುಶಾಲ್ ವಾದ್ವಾನಿ, ಧನುಷ್ ಗೌಡ, ಯಶೋವರ್ಧನ್ ಪರಂತಾಪ್, ಎಂ.ವೆಂಕಟೇಶ್, ಸಮಿತ್ ಕುಮಾರ್, ಶರತ್ ಶ್ರೀನಿವಾಸ್, ಸಿ.ಎ.ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಕೈ ಬೆರಳಿಗೆ ಗಾಯವಾಗಿರುವುದರಿಂದ ಆರಂಭಿಕ ಪಂದ್ಯಗಳಲ್ಲಿ ಮನೀಶ್ ಪಾಂಡೆ ತಂಡವನ್ನು ಮುನ್ನಡೆಸಲಿದ್ದಾರೆ.

ಆಗಸ್ಟ್ 11 ರಿಂದ ಪಂದ್ಯಾವಳಿ ಆರಂಭ
ವಿಶೇಷವೆಂದರೆ ಮಹಾರಾಜ ಟ್ರೋಫಿ 2025 ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಖ್ಯಾತ ಕ್ರಿಕೆಟಿಗರಾದ ಪ್ರಸಿದ್ಧ್ ಎಂ ಕೃಷ್ಣ, ಮನೀಷ್ ಪಾಂಡೆ ಮತ್ತು ಗೌತಮ್ ಕೆ ಅವರು ಆಡಲಿದ್ದಾರೆ. ಮಹಾರಾಜ ಟ್ರೋಫಿ ಪಂದ್ಯಾವಳಿಯು ಆಗಸ್ಟ್ 11 ರಿಂದ 27ರವರೆಗೆ ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದ್ದು, ಮೈಸೂರು ವಾರಿಯರ್ಸ್, ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳು ಪರಸ್ಪರ ಸೆಣೆಸಲಿವೆ.

ವಿಶೇಷಚೇತನ ಕ್ರೀಡಾಪಟುಗಳಿಗೆ ನೆರವು
ಎನ್.ಆರ್.ಗ್ರೂಪ್ ಕ್ರಿಕೆಟ್ ಜತೆಗೆ ಸಾಮಾಜಿಕ ಸೇವಾ ಕಾಯ ಗಳನ್ನೂ ಮಾಡುತ್ತಿದೆ. ಅಂತೆಯೇ ಈ ಬಾರಿ ದಕ್ಷಿಣ ಏಷ್ಯಾದ ಮೊದಲ ವೀಲ್‌ಚೇರ್ ಕ್ರಿಕೆಟ್ ಲೀಗ್ ಆಗಿರುವ ಎಬಿಲಿಟಿ ಸ್ಪೋರ್ಟ್ಸ್ ಲೀಗ್(ಎಎಸ್‌ಎಲ್) ಟಿ20 ಜತೆಗೆ ಕಾಸ್ ಪಾರ್ಟನರ್‌ಶಿಪ್ ಮಾಡಿ ಕೊಂಡಿದೆ. ಈ ಮೂಲಕ ವಿಶೇಷಚೇತನ ಕ್ರೀಡಾಪಟುಗಳಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪಽಸಲು ನೆರವಾಗಲಿದೆ.

ಕಳೆದ ವರ್ಷದಂತೆಯೇ ಈ ವರ್ಷವೂ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಆಟಗಾರರು ತೆಗೆಯುವ ಪ್ರತಿ ವಿಕೆಟ್‌ಗೆ 2 ಸಾವಿರ ರೂ., ಪ್ರತಿ ಸಿಕ್ಸರ್‌ಗೆ 1 ಸಾವಿರ ರೂ. ಮತ್ತು ಪ್ರತಿ ಬೌಂಡರಿಗೆ 500 ರೂ. ದೇಣಿಗೆ ನೀಡಲಿದೆ. ವಿಶೇಷಚೇತನ ಕ್ರೀಡಾಪಟುಗಳ ಸಬಲೀಕರಣಕ್ಕೆ ಈ ದೇಣಿಗೆ ಬಳಕೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

22 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

24 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

26 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

28 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

36 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

42 mins ago