ಮೈಸೂರು

ಯದುವೀರ್‌ ನೇತೃತ್ವದಲ್ಲಿ ಮೈಸೂರು ಇನ್ನಷ್ಟು ಅಭಿವೃದ್ಧಿ ಕಾಣಲಿದೆ: ರಾಧಾ ಮೊಹನ್‌ ದಾಸ್‌

ಮೈಸೂರು: ಯದುವೀರ್‌ ಪ್ರೌಢಿಮೆ ಹೊಂದಿರುವ ಯುವ ನಾಯಕರಾಗಿದ್ದಾರೆ. ಮೈಸೂರಿನ ಅಭಿವೃದ್ಧಿ ಬಗ್ಗೆ ಅವರು ಸಾಕಷ್ಟು ಕಲ್ಪನೆಯನ್ನು ಹೊಂದಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ತಿಳಿಸಿದರು.

ನಗರದ ಸರಸ್ವತಿಪುರಂ ವಿಜಯವಿಠಲ ಎಜುಕೇಷನಲ್ ಟ್ರಸ್ಟ್ ಇನ್ಸ್ಟಿಟ್ಯೂಟ್ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಸಾರ್ವಜನಿಕರ ಸಂವಾದದಲ್ಲಿ ಅವರು ಮಾತನಾಡಿದರು.

ಇದು ಅವರಿಗೆ ರಾಜಕೀಯ ಪುನರ್ಜನ್ಮದ ಅವಕಾಶ. ಮೈಸೂರು ಅರಸರು ಆರೋಗ್ಯ, ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಯುವ ಸಂಸದರ ನೇತೃತ್ವದಲ್ಲಿ ಮೈಸೂರು ಇನ್ನಷ್ಟು ಅಭಿವೃದ್ಧಿ ಕಾಣಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯದುವೀರ್ ಅವರನ್ನು ಈಗಾಗಲೇ ಸಂಸದ ಎಂದು ಜನರು ತೀರ್ವಾನಿಸಿದ್ದಾರೆ. ಈಗ ಜನರ ಜವಾಬ್ದಾರಿ ಹೆಚ್ಚಿದೆ. ಈ ಚುನಾವಣೆ ಮೈಸೂರಿನ ರಾಜರನ್ನು ನಾಲ್ಕೈದು ಲಕ್ಷ ಅಂತರದಿಂದ ಗೆಲ್ಲಿಸಬೇಕು. ಯದುವೀರ್‌ ಅವರಿಂದ ಇಡೀ ಕರ್ನಾಟಕ ಅಭಿವೃದ್ಧಿ ಆಗಬೇಕು ಎಂದು ಮನವಿ ಮಾಡಿದರು.

ಬಳಿಕ ಮಾತನಾಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ನಮ್ಮ ಪಕ್ಷ ಜಾತ್ಯಾತೀತವಾಗಿ ಕೆಲಸ ಮಾಡುತ್ತಿದೆ ಅದರಲ್ಲಿ ಯಾವ ಸಂಶಯವಿಲ್ಲ. ನಾನು ಜಾತಿ ನೋಡುವುದಿಲ್ಲ ಎಲ್ಲರೂ ಒಂದೇ ಎಂಬ ಮನೋಭಾವನೆ ಇಟ್ಟುಕೊಂಡು ಮತ ಯಾಚಿಸುತ್ತೇನೆ ಎಂದು ಹೇಳಿದರು.

ಮೈಸೂರು ಆರ್ಥಿಕವಾಗಿ ಸಬಲ ಮಾಡುವ ನಿಟ್ಟಿನಲ್ಲಿ ಪ್ರವಾಸೋದ್ಯಮವನ್ನು ಒಳಗೊಂಡಂತೆ ಅರ್ಗಾನಿಕ್ ಡೆವಲಪೆಂಟ್, ಸ್ವಚ್ಚತೆಗಾಗಿ ಬದಲಾವಣೆಯನ್ನು ತರಬೇಕಿರುವ ಬಯಕೆಯನ್ನು ಹೊಂದಿದ್ದೇನೆ. ಅಲ್ಲದೇ ಮೈಸೂರಿನಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಲಿಂಗಾಬುದಿ ಕೆರೆ ಹಾಳಾಗುತ್ತಿದೆ. ಕೆರೆಗಳ ಸಂರಕ್ಷಣೆಗಾಗಿ ವಾರಾಂತ್ಯ ಸ್ವಚ್ಚತೆ ಸಂಬಂಧ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಹೆರಿಟೇಜ್ ಕಟ್ಟಡಗಳಿಗೆ ಆಸ್ತಿ ತೆರಿಗೆ ವಿನಾಯಿತಿ ಸೇರಿದಂತೆ ಕ್ರಮ ವಹಿಸಿ ಜೈಪುರ ಮಾದರಿಲ್ಲಿ ಮೈಸೂರು ಮೂಲ ಸಂಪ್ರದಾಯವನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ವಿವರಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

3 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

3 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

3 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

3 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

3 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

3 hours ago