ಮೈಸೂರು

ಮೈಸೂರು | ವಿಚ್ಛೇದನವಾಗಿದೆ ಎಂದು ನಂಬಿಸಿ ಮಹಿಳೆಗೆ ವಂಚನೆ

ಮೈಸೂರು: ಪತ್ನಿ ಜೊತೆಯಲ್ಲಿದ್ದರೂ ಕೂಡ ತನಗೆ ವಿಚ್ಛೇದನವಾಗಿದೆ ಎಂದು ನಂಬಿಸಿ ಮಹಿಳೆಯೊಬ್ಬರನ್ನು ವಿವಾಹವಾಗಿದ್ದಲ್ಲದೆ, ಆಕೆಯಿಂದ 50 ಲಕ್ಷ ರೂ. ಹಣವನ್ನು ಪಡೆದು ವಂಚಿಸಿರುವ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.

ಕೇರಳರ ತ್ರಿಶೂರ್ ನಿವಾಸಿ ಶರತ್‌ರಾಮ್ ಎಂಬವರ ವಿರುದ್ಧ ಕುವೆಂಪುನಗರದಲ್ಲಿ ವಾಸಿಸುತ್ತಿರುವ ಎ.ಎಸ್.ರೋಜಾ ಹಾಗೂ ಕಮಲಮ್ಮ ಎಂಬವರು ದೂರು ದಾಖಲಿಸಿದ್ದಾರೆ.

ಕುವೆಂಪುನಗರದಲ್ಲಿ ಮಹಿಳಾ ಪಿಜಿ ನಡೆಸುತ್ತಿರುವ ರೋಜ ಅವರು 2013 ರಲ್ಲಿ ವಿವಾಹವಾಗಿದ್ದರು. ಕಾರಣಾಂತರಗಳಿಂದ ಪತಿಗೆ ವಿಚ್ಛೇದನ ನೀಡಿದ್ದರು. ನಂತರ 2022 ರಲ್ಲಿ ಅವರಿಗೆ ಡಿವೋರ್ಸ್ ಮ್ಯಾಟ್ರಮೋನಿ ಮೂಲಕ ಶರತ್ ರಾಮ್ ಪರಿಚಯವಾಗಿದೆ.
ನಂತರ ಆತ ನಾನು ಪತ್ನಿಯಿಂದ ವಿಚ್ಚೆದನ ಪಡೆದಿದ್ದೇನೆ ಎಂದು ನಕಲಿ ದಾಖಲೆಗಳನ್ನು ಆಕೆಗೆ ತೋರಿಸಿ 2023ರಲ್ಲಿ ರೋಜಾ ಅವರ ಕುಟುಂಬಸ್ಥರು ಹಾಗೂ ಶರತ್‌ರಾಮ್ ಅವರ ಸಂಬಂಽಕರ ಸಮ್ಮುಖದಲ್ಲಿ ಬೆಂಗಳೂರಿನ ದೇವಾಲಯವೊಂದರಲ್ಲಿ ವಿವಾಹವಾಗಿದ್ದಾರೆ.

ನಂತರ ಆತ ಹಂತ ಹಂತವಾಗಿ ರೋಜಾ ಅವರಿಂದ 11 ಲಕ್ಷ ರೂ. ಹಣವನ್ನು ಪಡೆದಿದ್ದಾನೆ. ಜೊತೆಗೆ ಅವರ ತಾಯಿ, ತಂದೆ ಹಾಗೂ ರೋಜಾ ಅವರ ಖಾತೆಯಿಂದ ೩೯ ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ.

ಆತ ಹರಿಲಾ ಎಂಬವರನ್ನು ವಿವಾಹವಾಗಿ ಆತನಿಗೆ ಮೂವರು ಮಕ್ಕಳಿದ್ದಾರೆ ಎಂಬುದು ರೋಜಾ ಅವರಿಗೆ ಗೊತ್ತಾಗಿದೆ. ಅಲ್ಲದೆ ಪದೇ ಪದೇ ಹಣಕ್ಕಾಗಿ ಪೀಡಿಸುತ್ತಿದ್ದ ಆತನ ವರ್ತನೆಯಿಂದ ಬೇಸತ್ತ ಆಕೆ ಶರತ್‌ರಾಮ್ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಹಾಗೂ ಕೊಲೆ ಬೆದರಿಕೆ ದೂರು ದಾಖಲಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

36 mins ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

41 mins ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

46 mins ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

52 mins ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

12 hours ago