ಮೈಸೂರು: ಪತ್ನಿ ಜೊತೆಯಲ್ಲಿದ್ದರೂ ಕೂಡ ತನಗೆ ವಿಚ್ಛೇದನವಾಗಿದೆ ಎಂದು ನಂಬಿಸಿ ಮಹಿಳೆಯೊಬ್ಬರನ್ನು ವಿವಾಹವಾಗಿದ್ದಲ್ಲದೆ, ಆಕೆಯಿಂದ 50 ಲಕ್ಷ ರೂ. ಹಣವನ್ನು ಪಡೆದು ವಂಚಿಸಿರುವ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.
ಕೇರಳರ ತ್ರಿಶೂರ್ ನಿವಾಸಿ ಶರತ್ರಾಮ್ ಎಂಬವರ ವಿರುದ್ಧ ಕುವೆಂಪುನಗರದಲ್ಲಿ ವಾಸಿಸುತ್ತಿರುವ ಎ.ಎಸ್.ರೋಜಾ ಹಾಗೂ ಕಮಲಮ್ಮ ಎಂಬವರು ದೂರು ದಾಖಲಿಸಿದ್ದಾರೆ.
ಕುವೆಂಪುನಗರದಲ್ಲಿ ಮಹಿಳಾ ಪಿಜಿ ನಡೆಸುತ್ತಿರುವ ರೋಜ ಅವರು 2013 ರಲ್ಲಿ ವಿವಾಹವಾಗಿದ್ದರು. ಕಾರಣಾಂತರಗಳಿಂದ ಪತಿಗೆ ವಿಚ್ಛೇದನ ನೀಡಿದ್ದರು. ನಂತರ 2022 ರಲ್ಲಿ ಅವರಿಗೆ ಡಿವೋರ್ಸ್ ಮ್ಯಾಟ್ರಮೋನಿ ಮೂಲಕ ಶರತ್ ರಾಮ್ ಪರಿಚಯವಾಗಿದೆ.
ನಂತರ ಆತ ನಾನು ಪತ್ನಿಯಿಂದ ವಿಚ್ಚೆದನ ಪಡೆದಿದ್ದೇನೆ ಎಂದು ನಕಲಿ ದಾಖಲೆಗಳನ್ನು ಆಕೆಗೆ ತೋರಿಸಿ 2023ರಲ್ಲಿ ರೋಜಾ ಅವರ ಕುಟುಂಬಸ್ಥರು ಹಾಗೂ ಶರತ್ರಾಮ್ ಅವರ ಸಂಬಂಽಕರ ಸಮ್ಮುಖದಲ್ಲಿ ಬೆಂಗಳೂರಿನ ದೇವಾಲಯವೊಂದರಲ್ಲಿ ವಿವಾಹವಾಗಿದ್ದಾರೆ.
ನಂತರ ಆತ ಹಂತ ಹಂತವಾಗಿ ರೋಜಾ ಅವರಿಂದ 11 ಲಕ್ಷ ರೂ. ಹಣವನ್ನು ಪಡೆದಿದ್ದಾನೆ. ಜೊತೆಗೆ ಅವರ ತಾಯಿ, ತಂದೆ ಹಾಗೂ ರೋಜಾ ಅವರ ಖಾತೆಯಿಂದ ೩೯ ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ.
ಆತ ಹರಿಲಾ ಎಂಬವರನ್ನು ವಿವಾಹವಾಗಿ ಆತನಿಗೆ ಮೂವರು ಮಕ್ಕಳಿದ್ದಾರೆ ಎಂಬುದು ರೋಜಾ ಅವರಿಗೆ ಗೊತ್ತಾಗಿದೆ. ಅಲ್ಲದೆ ಪದೇ ಪದೇ ಹಣಕ್ಕಾಗಿ ಪೀಡಿಸುತ್ತಿದ್ದ ಆತನ ವರ್ತನೆಯಿಂದ ಬೇಸತ್ತ ಆಕೆ ಶರತ್ರಾಮ್ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಹಾಗೂ ಕೊಲೆ ಬೆದರಿಕೆ ದೂರು ದಾಖಲಿಸಿದ್ದಾರೆ.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…