ಮೈಸೂರು

ಮೈಸೂರು | ವಿಚ್ಛೇದನವಾಗಿದೆ ಎಂದು ನಂಬಿಸಿ ಮಹಿಳೆಗೆ ವಂಚನೆ

ಮೈಸೂರು: ಪತ್ನಿ ಜೊತೆಯಲ್ಲಿದ್ದರೂ ಕೂಡ ತನಗೆ ವಿಚ್ಛೇದನವಾಗಿದೆ ಎಂದು ನಂಬಿಸಿ ಮಹಿಳೆಯೊಬ್ಬರನ್ನು ವಿವಾಹವಾಗಿದ್ದಲ್ಲದೆ, ಆಕೆಯಿಂದ 50 ಲಕ್ಷ ರೂ. ಹಣವನ್ನು ಪಡೆದು ವಂಚಿಸಿರುವ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.

ಕೇರಳರ ತ್ರಿಶೂರ್ ನಿವಾಸಿ ಶರತ್‌ರಾಮ್ ಎಂಬವರ ವಿರುದ್ಧ ಕುವೆಂಪುನಗರದಲ್ಲಿ ವಾಸಿಸುತ್ತಿರುವ ಎ.ಎಸ್.ರೋಜಾ ಹಾಗೂ ಕಮಲಮ್ಮ ಎಂಬವರು ದೂರು ದಾಖಲಿಸಿದ್ದಾರೆ.

ಕುವೆಂಪುನಗರದಲ್ಲಿ ಮಹಿಳಾ ಪಿಜಿ ನಡೆಸುತ್ತಿರುವ ರೋಜ ಅವರು 2013 ರಲ್ಲಿ ವಿವಾಹವಾಗಿದ್ದರು. ಕಾರಣಾಂತರಗಳಿಂದ ಪತಿಗೆ ವಿಚ್ಛೇದನ ನೀಡಿದ್ದರು. ನಂತರ 2022 ರಲ್ಲಿ ಅವರಿಗೆ ಡಿವೋರ್ಸ್ ಮ್ಯಾಟ್ರಮೋನಿ ಮೂಲಕ ಶರತ್ ರಾಮ್ ಪರಿಚಯವಾಗಿದೆ.
ನಂತರ ಆತ ನಾನು ಪತ್ನಿಯಿಂದ ವಿಚ್ಚೆದನ ಪಡೆದಿದ್ದೇನೆ ಎಂದು ನಕಲಿ ದಾಖಲೆಗಳನ್ನು ಆಕೆಗೆ ತೋರಿಸಿ 2023ರಲ್ಲಿ ರೋಜಾ ಅವರ ಕುಟುಂಬಸ್ಥರು ಹಾಗೂ ಶರತ್‌ರಾಮ್ ಅವರ ಸಂಬಂಽಕರ ಸಮ್ಮುಖದಲ್ಲಿ ಬೆಂಗಳೂರಿನ ದೇವಾಲಯವೊಂದರಲ್ಲಿ ವಿವಾಹವಾಗಿದ್ದಾರೆ.

ನಂತರ ಆತ ಹಂತ ಹಂತವಾಗಿ ರೋಜಾ ಅವರಿಂದ 11 ಲಕ್ಷ ರೂ. ಹಣವನ್ನು ಪಡೆದಿದ್ದಾನೆ. ಜೊತೆಗೆ ಅವರ ತಾಯಿ, ತಂದೆ ಹಾಗೂ ರೋಜಾ ಅವರ ಖಾತೆಯಿಂದ ೩೯ ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ.

ಆತ ಹರಿಲಾ ಎಂಬವರನ್ನು ವಿವಾಹವಾಗಿ ಆತನಿಗೆ ಮೂವರು ಮಕ್ಕಳಿದ್ದಾರೆ ಎಂಬುದು ರೋಜಾ ಅವರಿಗೆ ಗೊತ್ತಾಗಿದೆ. ಅಲ್ಲದೆ ಪದೇ ಪದೇ ಹಣಕ್ಕಾಗಿ ಪೀಡಿಸುತ್ತಿದ್ದ ಆತನ ವರ್ತನೆಯಿಂದ ಬೇಸತ್ತ ಆಕೆ ಶರತ್‌ರಾಮ್ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಹಾಗೂ ಕೊಲೆ ಬೆದರಿಕೆ ದೂರು ದಾಖಲಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

8 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

11 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

14 hours ago