cyber crine
ಮೈಸೂರು : ಸೈಬರ್ ವಂಚಕರು ನಗರದ ಇಬ್ಬರಿಂದ ೩೧ ಲಕ್ಷ ರೂ.ಗೂ ಹೆಚ್ಚು ಹಣ ಲಪಟಾಯಿಸಿರುವ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಸ್ವ-ಉದ್ಯೋಗಿ ಮಹಿಳೆಯೊಬ್ಬರು ನಕಲಿ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ ೧೯.೭೪ ಲಕ್ಷ ಹಾಗೂ ಎಪಿಕೆ ಫೈಲ್ಗಳ ಡೌನ್ಲೋಡ್ ಆಗಿದ್ದರಿಂದ ಖಾಸಗಿ ಸಂಸ್ಥೆ ಉದ್ಯೋಗಿ ೧೧.೬೯ ಲಕ್ಷ ಹಣ ಕಳೆದುಕೊಂಡಿದ್ದಾರೆ.
ಐಪಿಎಸ್ ಶ್ರಿನಿವಾಸನಗರದ ಮಹಿಳೆ, ನಾಲ್ಕು ತಿಂಗಳ ಹಿಂದೆ ಫೇಸ್ಬುಕ್ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ, ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ್ದಾರೆ. ನಂತರ ತಮ್ಮ ಹೆಸರು ಹಾಗೂ ಮೊಬೈಲ್ ನಂಬರ್ ನಮೂದಿಸಿ, ರಿಜಿಸ್ಟರ್ ಮಾಡಿಕೊಂಡಿ ದ್ದಾರೆ. ಕೂಡಲೇ ರಾಘವ್ ರಾಮ ಚಂದ್ರ ಹೆಸರಿನಲ್ಲಿ ಇಮೇಲ್ ಮೂಲಕ ಲಿಂಕ್ ಬಂದಿದ್ದು, ಅದರ ಮೂಲಕ ಮಹಿಳೆ ಟ್ರೇಡಿಂಗ್ ಅಕೌಂಟ್ ತೆರೆದಿದ್ದಾರೆ.
ಇದನ್ನು ಓದಿ: ಸೈಬರ್ ಪೊಲೀಸ್ ಸೋಗಿನಲ್ಲಿ ವಂಚನೆ : ಮಹಿಳೆ ಸೇರಿದಂತೆ ಐದು ಮಂದಿ ಬಂಧನ
ನಂತರ ನಿಖಿಲ್ ಗೌಡ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೊಬ್ಬ, ತನ್ನನ್ನು ಹಣಕಾಸು ಸಲಹೆಗಾರ ಎಂದು ಪರಿಚಯಿಸಿ ಕೊಂಡು, ಹೈ ವಾಲ್ಯೂಂ ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದಾನೆ ಬಳಿಕ ಸೂರಜ್ ರೆಡ್ಡಿ ಹೆಸರಿನಲ್ಲಿ ಕರೆ ಮಾಡಿದ ಮತ್ತೋರ್ವನೂ ಹಣಕಾಸು ಸಲಹೆಗಾರ ನೆಂದು ಹೇಳಿಕೊಂಡು ಟ್ರೇಡಿಂಗ್ನಲ್ಲಿ ಭಾರೀ ಲಾಭ ಸಿಗಲಿದೆ ಎಂದು ತಿಳಿಸಿದ್ದಾನೆ.
ಇವರುಗಳ ಮಾತು ನಂಬಿದ ಮಹಿಳೆ ಹಂತ ಹಂತವಾಗಿ ೧೯,೭೪,೭೦೦ ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ. ಒಮ್ಮೆ ಹಣವನ್ನು ವಿತ್ ಡ್ರಾ ಮಾಡಲು ಯತ್ನಿಸಿದಾಗ ತೆರಿಗೆ ಮೊತ್ತ ಪಾವತಿ ಸುವಂತೆ ಸೂಚಿಸಲಾಗಿದೆ. ಅದರಂತೆ ಹಣ ಪಾವತಿಸಿದ ನಂತರವೂ ವಿತ್ಡ್ರಾ ಸಾಧ್ಯವಾಗದಿದ್ದಾಗ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಮೈಸೂರು ತಾಲೂಕು ನಾಡನಹಳ್ಳಿ ನಿವಾಸಿಯೊಬ್ಬರ ಮೊಬೈಲ್ಗೆ ಬಂದ ಎಪಿಕೆ ಫೈಲ್ಗಳು ಡೌನ್ಛೋಡ್ ಆದ ಬಳಿಕ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್ನಲ್ಲಿನ ಅವರ ಖಾತೆಯಿಂದ ೧೧,೬೯,೬೦೦ ರೂ. ಅಪರಿಚಿತರ ಖಾತೆಗೆ ವರ್ಗಾ ವಣೆಗೊಂಡಿದ್ದು, ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…