ಮೈಸೂರು

ಮೈಸೂರು | ಸೈಬರ್‌ ವಂಚಕರಿಂದ 21 ಲಕ್ಷಕ್ಕೂ ಹೆಚ್ಚ ಹಣ ಕಳೆದುಕೊಂಡ ಮಹಿಳೆ

ಮೈಸೂರು : ಸೈಬರ್ ವಂಚಕರು ನಗರದ ಇಬ್ಬರಿಂದ ೩೧ ಲಕ್ಷ ರೂ.ಗೂ ಹೆಚ್ಚು ಹಣ ಲಪಟಾಯಿಸಿರುವ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಸ್ವ-ಉದ್ಯೋಗಿ ಮಹಿಳೆಯೊಬ್ಬರು ನಕಲಿ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿ ೧೯.೭೪ ಲಕ್ಷ ಹಾಗೂ ಎಪಿಕೆ ಫೈಲ್‌ಗಳ ಡೌನ್‌ಲೋಡ್ ಆಗಿದ್ದರಿಂದ ಖಾಸಗಿ ಸಂಸ್ಥೆ ಉದ್ಯೋಗಿ ೧೧.೬೯ ಲಕ್ಷ ಹಣ ಕಳೆದುಕೊಂಡಿದ್ದಾರೆ.

ಐಪಿಎಸ್ ಶ್ರಿನಿವಾಸನಗರದ ಮಹಿಳೆ, ನಾಲ್ಕು ತಿಂಗಳ ಹಿಂದೆ ಫೇಸ್‌ಬುಕ್‌ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ, ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ್ದಾರೆ. ನಂತರ ತಮ್ಮ ಹೆಸರು ಹಾಗೂ ಮೊಬೈಲ್ ನಂಬರ್ ನಮೂದಿಸಿ, ರಿಜಿಸ್ಟರ್ ಮಾಡಿಕೊಂಡಿ ದ್ದಾರೆ. ಕೂಡಲೇ ರಾಘವ್ ರಾಮ ಚಂದ್ರ ಹೆಸರಿನಲ್ಲಿ ಇಮೇಲ್ ಮೂಲಕ ಲಿಂಕ್ ಬಂದಿದ್ದು, ಅದರ ಮೂಲಕ ಮಹಿಳೆ ಟ್ರೇಡಿಂಗ್ ಅಕೌಂಟ್ ತೆರೆದಿದ್ದಾರೆ.

ಇದನ್ನು ಓದಿ: ಸೈಬರ್‌ ಪೊಲೀಸ್‌ ಸೋಗಿನಲ್ಲಿ ವಂಚನೆ : ಮಹಿಳೆ ಸೇರಿದಂತೆ ಐದು ಮಂದಿ ಬಂಧನ

ನಂತರ ನಿಖಿಲ್ ಗೌಡ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೊಬ್ಬ, ತನ್ನನ್ನು ಹಣಕಾಸು ಸಲಹೆಗಾರ ಎಂದು ಪರಿಚಯಿಸಿ ಕೊಂಡು, ಹೈ ವಾಲ್ಯೂಂ ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದಾನೆ ಬಳಿಕ ಸೂರಜ್ ರೆಡ್ಡಿ ಹೆಸರಿನಲ್ಲಿ ಕರೆ ಮಾಡಿದ ಮತ್ತೋರ್ವನೂ ಹಣಕಾಸು ಸಲಹೆಗಾರ ನೆಂದು ಹೇಳಿಕೊಂಡು ಟ್ರೇಡಿಂಗ್‌ನಲ್ಲಿ ಭಾರೀ ಲಾಭ ಸಿಗಲಿದೆ ಎಂದು ತಿಳಿಸಿದ್ದಾನೆ.

ಇವರುಗಳ ಮಾತು ನಂಬಿದ ಮಹಿಳೆ ಹಂತ ಹಂತವಾಗಿ ೧೯,೭೪,೭೦೦ ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ. ಒಮ್ಮೆ ಹಣವನ್ನು ವಿತ್ ಡ್ರಾ ಮಾಡಲು ಯತ್ನಿಸಿದಾಗ ತೆರಿಗೆ ಮೊತ್ತ ಪಾವತಿ ಸುವಂತೆ ಸೂಚಿಸಲಾಗಿದೆ. ಅದರಂತೆ ಹಣ ಪಾವತಿಸಿದ ನಂತರವೂ ವಿತ್‌ಡ್ರಾ ಸಾಧ್ಯವಾಗದಿದ್ದಾಗ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮೈಸೂರು ತಾಲೂಕು ನಾಡನಹಳ್ಳಿ ನಿವಾಸಿಯೊಬ್ಬರ ಮೊಬೈಲ್‌ಗೆ ಬಂದ ಎಪಿಕೆ ಫೈಲ್‌ಗಳು ಡೌನ್ಛೋಡ್ ಆದ ಬಳಿಕ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ಅವರ ಖಾತೆಯಿಂದ ೧೧,೬೯,೬೦೦ ರೂ. ಅಪರಿಚಿತರ ಖಾತೆಗೆ ವರ್ಗಾ ವಣೆಗೊಂಡಿದ್ದು, ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

1 hour ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

1 hour ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

1 hour ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

2 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

12 hours ago