ಮೈಸೂರು

ಮೈಸೂರು | ಸೈಬರ್‌ ವಂಚಕರಿಂದ 21 ಲಕ್ಷಕ್ಕೂ ಹೆಚ್ಚ ಹಣ ಕಳೆದುಕೊಂಡ ಮಹಿಳೆ

ಮೈಸೂರು : ಸೈಬರ್ ವಂಚಕರು ನಗರದ ಇಬ್ಬರಿಂದ ೩೧ ಲಕ್ಷ ರೂ.ಗೂ ಹೆಚ್ಚು ಹಣ ಲಪಟಾಯಿಸಿರುವ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಸ್ವ-ಉದ್ಯೋಗಿ ಮಹಿಳೆಯೊಬ್ಬರು ನಕಲಿ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿ ೧೯.೭೪ ಲಕ್ಷ ಹಾಗೂ ಎಪಿಕೆ ಫೈಲ್‌ಗಳ ಡೌನ್‌ಲೋಡ್ ಆಗಿದ್ದರಿಂದ ಖಾಸಗಿ ಸಂಸ್ಥೆ ಉದ್ಯೋಗಿ ೧೧.೬೯ ಲಕ್ಷ ಹಣ ಕಳೆದುಕೊಂಡಿದ್ದಾರೆ.

ಐಪಿಎಸ್ ಶ್ರಿನಿವಾಸನಗರದ ಮಹಿಳೆ, ನಾಲ್ಕು ತಿಂಗಳ ಹಿಂದೆ ಫೇಸ್‌ಬುಕ್‌ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ, ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ್ದಾರೆ. ನಂತರ ತಮ್ಮ ಹೆಸರು ಹಾಗೂ ಮೊಬೈಲ್ ನಂಬರ್ ನಮೂದಿಸಿ, ರಿಜಿಸ್ಟರ್ ಮಾಡಿಕೊಂಡಿ ದ್ದಾರೆ. ಕೂಡಲೇ ರಾಘವ್ ರಾಮ ಚಂದ್ರ ಹೆಸರಿನಲ್ಲಿ ಇಮೇಲ್ ಮೂಲಕ ಲಿಂಕ್ ಬಂದಿದ್ದು, ಅದರ ಮೂಲಕ ಮಹಿಳೆ ಟ್ರೇಡಿಂಗ್ ಅಕೌಂಟ್ ತೆರೆದಿದ್ದಾರೆ.

ಇದನ್ನು ಓದಿ: ಸೈಬರ್‌ ಪೊಲೀಸ್‌ ಸೋಗಿನಲ್ಲಿ ವಂಚನೆ : ಮಹಿಳೆ ಸೇರಿದಂತೆ ಐದು ಮಂದಿ ಬಂಧನ

ನಂತರ ನಿಖಿಲ್ ಗೌಡ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೊಬ್ಬ, ತನ್ನನ್ನು ಹಣಕಾಸು ಸಲಹೆಗಾರ ಎಂದು ಪರಿಚಯಿಸಿ ಕೊಂಡು, ಹೈ ವಾಲ್ಯೂಂ ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದಾನೆ ಬಳಿಕ ಸೂರಜ್ ರೆಡ್ಡಿ ಹೆಸರಿನಲ್ಲಿ ಕರೆ ಮಾಡಿದ ಮತ್ತೋರ್ವನೂ ಹಣಕಾಸು ಸಲಹೆಗಾರ ನೆಂದು ಹೇಳಿಕೊಂಡು ಟ್ರೇಡಿಂಗ್‌ನಲ್ಲಿ ಭಾರೀ ಲಾಭ ಸಿಗಲಿದೆ ಎಂದು ತಿಳಿಸಿದ್ದಾನೆ.

ಇವರುಗಳ ಮಾತು ನಂಬಿದ ಮಹಿಳೆ ಹಂತ ಹಂತವಾಗಿ ೧೯,೭೪,೭೦೦ ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ. ಒಮ್ಮೆ ಹಣವನ್ನು ವಿತ್ ಡ್ರಾ ಮಾಡಲು ಯತ್ನಿಸಿದಾಗ ತೆರಿಗೆ ಮೊತ್ತ ಪಾವತಿ ಸುವಂತೆ ಸೂಚಿಸಲಾಗಿದೆ. ಅದರಂತೆ ಹಣ ಪಾವತಿಸಿದ ನಂತರವೂ ವಿತ್‌ಡ್ರಾ ಸಾಧ್ಯವಾಗದಿದ್ದಾಗ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮೈಸೂರು ತಾಲೂಕು ನಾಡನಹಳ್ಳಿ ನಿವಾಸಿಯೊಬ್ಬರ ಮೊಬೈಲ್‌ಗೆ ಬಂದ ಎಪಿಕೆ ಫೈಲ್‌ಗಳು ಡೌನ್ಛೋಡ್ ಆದ ಬಳಿಕ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ಅವರ ಖಾತೆಯಿಂದ ೧೧,೬೯,೬೦೦ ರೂ. ಅಪರಿಚಿತರ ಖಾತೆಗೆ ವರ್ಗಾ ವಣೆಗೊಂಡಿದ್ದು, ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

8 mins ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

16 mins ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

1 hour ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

4 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 hours ago