ಮೈಸೂರು: ಇಲ್ಲಿನ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ಬೆಂಗಳೂರಿನ ಇನ್ ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಆಂಡ್ ರಿಸರ್ಚ್ (ಐಎಂಎಸ್ಆರ್) ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಪತ್ರಿಕಾ ಬರಹ ಕೌಶಲ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಮಾರ್ಚ್ 25, 26 ರಂದು ಏರ್ಪಡಿಸಲಾಗಿದೆ.
ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಮಾರ್ಚ್ 25 ರಂದು ಬೆಳಗ್ಗೆ 10.30 ಗಂಟೆಗೆ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ.
ಕಾರ್ಯಾಗಾರವನ್ನು ಮೈಸೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಪ್ರೊ.ಎನ್.ಮಮತಾ ಉದ್ಘಾಟಿಸುವರು. ಅಸ್ಸಾಂನ ಸಿಲ್ಚಾರ್ ನ ಕೇಂದ್ರೀಯ ವಿಶ್ವವಿದ್ಯಾನಿಲಯದ ವಿಶ್ರಾಂತ ಸಹ ಕುಲಪತಿ ಪ್ರೊ.ಕೆ.ವಿ.ನಾಗರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾಲೇಜಿನ ಚೀಫ್ ಎಕ್ಸಿಕ್ಯೂಟಿವ್ ಪ್ರೊ.ಬಿ.ವಿ.ಸಾಂಬಶಿವಯ್ಯ ಅಧ್ಯಕ್ಷತೆ ವಹಿಸುವರು. ಪ್ರಾಂಶುಪಾಲರಾದ ಡಾ.ಎಂ.ಪ್ರಭು, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ತ್ರಿವೇಣಿ ಅವರು ಉಪಸ್ಥಿತರಿರುವರು.
ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತರಾದ ಎಚ್.ಆರ್.ಶ್ರೀಶ, ಎಂ.ನಾಗರಾಜ, ಹೊನಕೆರೆ ನಂಜುಂಡೇಗೌಡ, ಡಾ.ಕೂಡ್ಲಿ ಗುರುರಾಜ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.
ಗ್
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…