ಮೈಸೂರು

ಮೈಸೂರು ಮೃಗಾಲಯದ ಸಿಂಹಿಣಿ ʻರಕ್ಷಿತʼ ಇನ್ನಿಲ್ಲ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಸುಮಾರು 21 ವರ್ಷ 4 ತಿಂಗಳ ವಯಸ್ಸಿನ ‘ರಕ್ಷಿತ’ ಸಿಂಹಿಣಿ ಶನಿವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದೆ.

ರಕ್ಷಿತ ಸಿಂಹಿಣಿಯು 2004ರ ಏಪ್ರಿಲ್ 1ರಂದು ಮೈಸೂರು ಮೃಗಾಲಯದಲ್ಲಿ ನರಸಿಂಹ ಮತ್ತು ಮಾನಿನಿ ಎಂಬ ಸಿಂಹಗಳಿಗೆ ಜನಿಸಿ, ಇದುವರೆವಿಗೂ ಮೃಗಾಲಯದ ಆಕರ್ಷಣೆಗಳಲ್ಲಿ ಒಂದಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಕ್ಷಿತಗೆ ಕಳೆದ ಒಂದು ವಾರದಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಸಹಜವಾಗಿ ಸಾವನ್ನಪ್ಪಿದೆ. ಸಿಂಹಣಿಯ ಸಾವಿನಿಂದ ಮೈಸೂರು ಮೃಗಾಲಯಕ್ಕೆ ಅಪಾರ ನಷ್ಟವನ್ನು ಉಂಟು ಮಾಡಿದೆ. ಮೃಗಾಲಯದ ಆಡಳಿತ ವರ್ಗ, ಪಶು ವೈದ್ಯಕೀಯ ತಂಡ ಮತ್ತು ಪ್ರಾಣಿಪಾಲನಾ ತಂಡ ರಕ್ಷಿತಳ ಸಾವಿಗೆ ತೀವ್ರ ಸಂತಾಪ ಸೂಚಿಸಿದೆ.

ರಕ್ಷಿತಳ ಚಿಕಿತ್ಸೆಯ ಸಂದರ್ಭದಲ್ಲಿ ಜಾಗತಿಕ ಪಶು ವೈದ್ಯಕೀಯ ಸಮುದಾಯ ಮತ್ತು ವನ್ಯಜೀವಿ ಸಂರಕ್ಷಕರು ನೀಡಿದ ಬೆಂಬಲವನ್ನು ಶ್ಲಾಘಿಸಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

4 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

4 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

4 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

4 hours ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

4 hours ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

4 hours ago