ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಸುಮಾರು 21 ವರ್ಷ 4 ತಿಂಗಳ ವಯಸ್ಸಿನ ‘ರಕ್ಷಿತ’ ಸಿಂಹಿಣಿ ಶನಿವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದೆ.
ರಕ್ಷಿತ ಸಿಂಹಿಣಿಯು 2004ರ ಏಪ್ರಿಲ್ 1ರಂದು ಮೈಸೂರು ಮೃಗಾಲಯದಲ್ಲಿ ನರಸಿಂಹ ಮತ್ತು ಮಾನಿನಿ ಎಂಬ ಸಿಂಹಗಳಿಗೆ ಜನಿಸಿ, ಇದುವರೆವಿಗೂ ಮೃಗಾಲಯದ ಆಕರ್ಷಣೆಗಳಲ್ಲಿ ಒಂದಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಕ್ಷಿತಗೆ ಕಳೆದ ಒಂದು ವಾರದಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಸಹಜವಾಗಿ ಸಾವನ್ನಪ್ಪಿದೆ. ಸಿಂಹಣಿಯ ಸಾವಿನಿಂದ ಮೈಸೂರು ಮೃಗಾಲಯಕ್ಕೆ ಅಪಾರ ನಷ್ಟವನ್ನು ಉಂಟು ಮಾಡಿದೆ. ಮೃಗಾಲಯದ ಆಡಳಿತ ವರ್ಗ, ಪಶು ವೈದ್ಯಕೀಯ ತಂಡ ಮತ್ತು ಪ್ರಾಣಿಪಾಲನಾ ತಂಡ ರಕ್ಷಿತಳ ಸಾವಿಗೆ ತೀವ್ರ ಸಂತಾಪ ಸೂಚಿಸಿದೆ.
ರಕ್ಷಿತಳ ಚಿಕಿತ್ಸೆಯ ಸಂದರ್ಭದಲ್ಲಿ ಜಾಗತಿಕ ಪಶು ವೈದ್ಯಕೀಯ ಸಮುದಾಯ ಮತ್ತು ವನ್ಯಜೀವಿ ಸಂರಕ್ಷಕರು ನೀಡಿದ ಬೆಂಬಲವನ್ನು ಶ್ಲಾಘಿಸಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…