ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಸುಮಾರು 21 ವರ್ಷ 4 ತಿಂಗಳ ವಯಸ್ಸಿನ ‘ರಕ್ಷಿತ’ ಸಿಂಹಿಣಿ ಶನಿವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದೆ.
ರಕ್ಷಿತ ಸಿಂಹಿಣಿಯು 2004ರ ಏಪ್ರಿಲ್ 1ರಂದು ಮೈಸೂರು ಮೃಗಾಲಯದಲ್ಲಿ ನರಸಿಂಹ ಮತ್ತು ಮಾನಿನಿ ಎಂಬ ಸಿಂಹಗಳಿಗೆ ಜನಿಸಿ, ಇದುವರೆವಿಗೂ ಮೃಗಾಲಯದ ಆಕರ್ಷಣೆಗಳಲ್ಲಿ ಒಂದಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಕ್ಷಿತಗೆ ಕಳೆದ ಒಂದು ವಾರದಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಸಹಜವಾಗಿ ಸಾವನ್ನಪ್ಪಿದೆ. ಸಿಂಹಣಿಯ ಸಾವಿನಿಂದ ಮೈಸೂರು ಮೃಗಾಲಯಕ್ಕೆ ಅಪಾರ ನಷ್ಟವನ್ನು ಉಂಟು ಮಾಡಿದೆ. ಮೃಗಾಲಯದ ಆಡಳಿತ ವರ್ಗ, ಪಶು ವೈದ್ಯಕೀಯ ತಂಡ ಮತ್ತು ಪ್ರಾಣಿಪಾಲನಾ ತಂಡ ರಕ್ಷಿತಳ ಸಾವಿಗೆ ತೀವ್ರ ಸಂತಾಪ ಸೂಚಿಸಿದೆ.
ರಕ್ಷಿತಳ ಚಿಕಿತ್ಸೆಯ ಸಂದರ್ಭದಲ್ಲಿ ಜಾಗತಿಕ ಪಶು ವೈದ್ಯಕೀಯ ಸಮುದಾಯ ಮತ್ತು ವನ್ಯಜೀವಿ ಸಂರಕ್ಷಕರು ನೀಡಿದ ಬೆಂಬಲವನ್ನು ಶ್ಲಾಘಿಸಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…