ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದಿದ್ದ ವಿಚಾರ ಇದೀಗ ಭಾರೀ ಸದ್ದು ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಚಾ.ನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರತಿಕ್ರಿಯೆ ನೀಡಿದ್ದು, ನಮ್ಮ ಬಳಿ ರಾಜಮನೆತನಕ್ಕೆ ಸೇರಿದ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ ರಾಜಮನೆತನಕ್ಕೆ ಸೇರಿದ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಸಾರ್ವಜನಿಕರು ಆತಂಕಪಡುವ ಪ್ರಮೇಯವಿಲ್ಲ. ರಾಜಮಾತೆ ಅವರು ಕಳೆದ ಮಾರ್ಚ್ ಕೊನೆಯ ವಾರದಂದು ತಕರಾರು ಪತ್ರ ಬರೆದಿದ್ದಾರೆ. ಅದರಲ್ಲಿ ಅಟ್ಟುಗುಳಿಪುರ ಸೇರಿದಂತೆ 7-8 ಗ್ರಾಮಗಳಲ್ಲಿ ನಮ್ಮ ಜಮೀನುಗಳ ಮೇಲೆ ಹಕ್ಕುಗಳಿವೆ. ಹೀಗಾಗಿ ಕಂದಾಯ ಗ್ರಾಮ ಎಂದು ಕಳುಹಿಸಬೇಡಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ನಮಗೆ ಪತ್ರದೊಂದಿಗೆ ಯಾವುದೇ ಸೂಕ್ತ ದಾಖಲೆಗಳನ್ನು ನೀಡಿಲ್ಲ. ಸದ್ಯ ಪತ್ರವನ್ನು ಎಸಿ ಹಾಗೂ ತಹಸೀಲ್ದಾರ್ ಅವರಿಗೆ ಪರಿಶೀಲಿಸುವಂತೆ ತಿಳಿಸಿದ್ದೇನೆ. ಪರಿಶೀಲಿಸಿದ ನಂತರ ಎಲ್ಲಾ ಮಾಹಿತಿ ದೊರೆಯಲಿದೆ. ನಮ್ಮ ಬಳಿ ರಾಜಮನೆತನಕ್ಕೆ ಸೇರಿದ ಆಸ್ತಿ ಎಂದು ಇದುವರೆಗೂ ಯಾವುದೇ ದಾಖಲೆ ದೊರೆತಿಲ್ಲ. ಅವರು ತಕರಾರು ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಅದನ್ನು ಪರಿಶೀಲನೆ ನಡೆಸಲು ಹೇಳಿದ್ದೇವೆ. ಒಂದು ವಾರದೊಳಗೆ ದಾಖಲೆ ಪರಿಶೀಲಿಸಿ ವರದಿ ನೀಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…
ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…
ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…
ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…
ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…
ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…