ಮೈಸೂರು

ನಮ್ಮ ಬಳಿ ರಾಜಮನೆತನಕ್ಕೆ ಸೇರಿದ ಯಾವುದೇ ದಾಖಲೆಗಳಿಲ್ಲ: ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್

ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದಿದ್ದ ವಿಚಾರ ಇದೀಗ ಭಾರೀ ಸದ್ದು ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಚಾ.ನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಪ್ರತಿಕ್ರಿಯೆ ನೀಡಿದ್ದು, ನಮ್ಮ ಬಳಿ ರಾಜಮನೆತನಕ್ಕೆ ಸೇರಿದ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ ರಾಜಮನೆತನಕ್ಕೆ ಸೇರಿದ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಸಾರ್ವಜನಿಕರು ಆತಂಕಪಡುವ ಪ್ರಮೇಯವಿಲ್ಲ. ರಾಜಮಾತೆ ಅವರು ಕಳೆದ ಮಾರ್ಚ್ ಕೊನೆಯ ವಾರದಂದು ತಕರಾರು ಪತ್ರ ಬರೆದಿದ್ದಾರೆ. ಅದರಲ್ಲಿ ಅಟ್ಟುಗುಳಿಪುರ ಸೇರಿದಂತೆ 7-8 ಗ್ರಾಮಗಳಲ್ಲಿ ನಮ್ಮ ಜಮೀನುಗಳ ಮೇಲೆ ಹಕ್ಕುಗಳಿವೆ. ಹೀಗಾಗಿ ಕಂದಾಯ ಗ್ರಾಮ ಎಂದು ಕಳುಹಿಸಬೇಡಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ನಮಗೆ ಪತ್ರದೊಂದಿಗೆ ಯಾವುದೇ ಸೂಕ್ತ ದಾಖಲೆಗಳನ್ನು ನೀಡಿಲ್ಲ. ಸದ್ಯ ಪತ್ರವನ್ನು ಎಸಿ ಹಾಗೂ ತಹಸೀಲ್ದಾರ್ ಅವರಿಗೆ ಪರಿಶೀಲಿಸುವಂತೆ ತಿಳಿಸಿದ್ದೇನೆ. ಪರಿಶೀಲಿಸಿದ ನಂತರ ಎಲ್ಲಾ ಮಾಹಿತಿ ದೊರೆಯಲಿದೆ. ನಮ್ಮ ಬಳಿ ರಾಜಮನೆತನಕ್ಕೆ ಸೇರಿದ ಆಸ್ತಿ ಎಂದು ಇದುವರೆಗೂ ಯಾವುದೇ ದಾಖಲೆ ದೊರೆತಿಲ್ಲ. ಅವರು ತಕರಾರು ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಅದನ್ನು ಪರಿಶೀಲನೆ ನಡೆಸಲು ಹೇಳಿದ್ದೇವೆ. ಒಂದು ವಾರದೊಳಗೆ ದಾಖಲೆ ಪರಿಶೀಲಿಸಿ ವರದಿ ನೀಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago