ಮೈಸೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಜಿಲ್ಲೆಯಲ್ಲಿ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷಾ ಗಣತಿ ಕಾರ್ಯಕ್ಕೆ ಹಾಜರಾಗದ ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಗಣತಿ ಕಾರ್ಯಕ್ಕೆ ಹಾಜರಾಗುವವರು ಅಧಿಕಾರಿಗಳ ದೂರವಾಣಿ ಕೆರೆಯನ್ನು ಸ್ವೀಕರಿಸದೇ ಬೇಜವಾಬ್ದಾರಿ ಹಾಗೂ ಅತೀವ ನಿರ್ಲಕ್ಷ್ಯ ತೋರಿದ 8 ಸಹ ಶಿಕ್ಷಕರನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ಆದೇಶದ ಮೇರೆಗೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ. ಜವರೇಗೌಡ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ :-ಬಿಸಿಸಿಐಗೆ ನೂತನ ಅಧ್ಯಕ್ಷರ ನೇಮಕ
ಅಮಾನತು ಆದ ಸಹ ಶಿಕ್ಷಕರು….
1.ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಕೆಸರೆ, ಉತ್ತರ ವಲಯ, ಮೈಸೂರು
2.ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆ, ರಾಜೇಂದ್ರನಗರ, ಉತ್ತರ ವಲಯ, ಮೈಸೂರು,
3.ಆದರ್ಶ ವಿದ್ಯಾಲಯ, ಜಾಕಿ ಕ್ವಾಟ್ರಸ್, ದಕ್ಷಿಣ ವಲಯ, ಮೈಸೂರು
4 ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ, ಕರಿಗೌಡರ ಬೀದಿ, ಹುಣಸೂರು ತಾಲ್ಲೂಕು, ಮೈಸೂರು
5.ಶ್ರೀ ಶಾರದಾ ಪ್ರೌಢಶಾಲೆ, ಬಿ.ಬಿ. ಗಾರ್ಡನ್, ದಕ್ಷಿಣ ವಲಯ, ಮೈಸೂರು
6.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮರುಳಯ್ಯನಕೊಪ್ಪಲು, ಹುಣಸುರು ತಾಲ್ಲೂಕು
7.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕರಿಮುದ್ದನಹಳ್ಳಿ, ಹುಣಸೂರು ತಾಲ್ಲೂಕು
8.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುರುಪುರ, ಹುಣಸೂರು ತಾಲ್ಲೂಕು
ಈ ಶಾಲೆಯ ಸಹ ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…