Categories: ಮೈಸೂರು

ಅಂಬೇಡ್ಕರ್‌ ಭವನ ಪೂರ್ಣಗೊಳಿಸದಿದ್ದರೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ದಸಂಸ ನಿರ್ಧಾರ

ಮೈಸೂರು: ನಗರದ ಹೃದಯ ಭಾಗದಲ್ಲಿ ಹಲವು ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್‌ ಸಮುದಾಯ ಭವನದ ಕಾಮಗಾರಿಯು ಡಿಸೆಂಬರ್‌ 6ರೊಳಗೆ ಪುನರಾರಂಭವಾಗದಿದ್ದರೆ ಡಿಸೆಂಬರ್‌ 6 ಸರ್ಕಾರಿ ಕಾರ್ಯಕ್ರಮಕ್ಕೆ ತಡೆಯೊಡ್ಡಲು ದಸಂಸ(ದಲಿತ ಸಂಘರ್ಷ ಸಮಿತಿ) ನಿರ್ಧಾರಿಸಿದೆ ಎಂದು ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ದಲಿತ ಸಮುದಾಯಗಳ ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಡಾ.ಬಿ.ಆರ್ ಅಂಬೇಡ್ಕರ್ ಭವನ ಶಕ್ತಿಕೇಂದ್ರದಂತೆ ಕಾರ್ಯನಿರ್ವಹಿಸಲಿ ಎಂಬ ವಿಶಾಲ ಆಶಯದಿಂದ ಅಂದಿನ ಮೈಸೂರು ಜಿಲ್ಲಾಧಿಕಾರಿಗಳಾದ ಪಿ.ಮಣಿವಣ್ಣನ್ ಅವರು ಮೈಸೂರು ನಗರದ ಚಾಮುಂಡಿ ಗೆಸ್ಟ್ ಹೌಸ್ ಹಿಂಭಾಗದ ಸಮಾಜ ಕಲ್ಯಾಣ ಇಲಾಖೆಯ ಸುಪರ್ದಿಯಲ್ಲಿದ್ದ ಖಾಲಿ ನಿವೇಶನವನ್ನು ದಸಂಸ ಒತ್ತಾಯದಂತೆ ಜುಲೈ 28, 2010 ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿದರು. ಅಲ್ಲದೆ, ಮೈಸೂರು ಮಹಾನಗರಪಾಲಿಕೆ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಗಳಲ್ಲಿ ಖರ್ಚಾಗದೆ ಉಳಿದಿದ್ದ ಶೇ.22.75 ದಲಿತರ ಅನುದಾನದಲ್ಲಿ 14.66 ಕೋಟಿ ರೂಪಾಯಿಗಳನ್ನು ಕ್ರೂಡಿಕರಿಸಿ, ಸುಮಾರು 15 ಕೋಟಿ ವೆಚ್ಚದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನದ ಕಾಮಗಾರಿ ಕೈಗೊಳ್ಳಲಾಗಿತ್ತು. ಆದರೆ ಅಂದಿನಿಂದ ಈವರೆಗೆ ಕಾಮಗಾರಿ ಕುಂಟುತ್ತಲೇ ಸಾಗಿದ್ದು, ಸಿವಿಲ್‌  ಕೆಲಸವಷ್ಟೇ ನಡೆದು ಅಪೂರ್ಣಗೊಂಡಿದೆ ಎಂದು ಬೇಸರಿಸಿದರು.

ಇದೀಗ, ಕಾಮಗಾರಿ ವಿಳಂಬದ ಕಾರಣದಿಂದ 15 ಕೋಟಿಗೆ ಮುಗಿಯಬೇಕಿದ್ದ ಕಾಮಗಾರಿ ಅಂದಾಜು ವೆಚ್ಚ ಈಗ ಸುಮಾರು 34 ಕೋಟಿಗೆ ಏರಿಕೆಯಾಗಿದೆ. ಈಗ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲವೆಂಬ ನೆಪದಲ್ಲಿ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದೆ ಎಂದರು.

2013 ರಲ್ಲಿ ದಲಿತ ಸಮುದಾಯದ ಅತಿ ಹೆಚ್ಚು ಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಮೈಸೂರಿನವರೇ ಆದ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ, ದಲಿತ ಸಮುದಾಯದ ದಿವಂಗತ ವಿ.ಶ್ರೀನಿವಾಸ್ ಪ್ರಸಾದ್, ಹೆಚ್.ಸಿ.ಮಹದೇವಪ್ಪರವರು ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದರು ಭವನ ಪೂರ್ಣಗೊಳಿಸಲು ಮುಂದಾಗದಿರುವುದು ಪ್ರಶ್ನೆಯಾಗಿಯೇ ಉಳಿದಿದೆ ಎಂದರು ಹೇಳಿದರು.

ಅಂಬೇಡ್ಕರ್ ಭವನದ ನಂತರ ಪ್ರಾರಂಭವಾದ ಜಿಲ್ಲಾಧಿಕಾರಿಗಳ ಕಟ್ಟಡ, ನಗರ ಪೊಲೀಸ್ ಆಯುಕ್ತರ ಕಟ್ಟಡ, ಜಿಲ್ಲಾಸ್ಪತ್ರೆ, ಮಹಾರಾಣಿ ಕಾಲೇಜು ಕಟ್ಟಡ ಇತ್ಯಾದಿಗಳು ಉದ್ಘಾಟನೆಗೊಂಡು ವರ್ಷಗಳೇ ಕಳೆದಿವೆ. ಆದರೆ, ಭವನ ಮಾತ್ರ ಪೂರ್ಣಗೊಂಡಿಲ್ಲ. ಈಗ 2023 ರಲ್ಲಿ ಮತ್ತೆ ದಲಿತ ಸಮುದಾಯದ ಅತಿ ಹೆಚ್ಚು ಮತ ಪಡೆದು ಪುನಃ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಮೈಸೂರಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿದ್ದು, ದಲಿತ ಸಮುದಾಯದ ಡಾ.ಹೆಚ್ .ಸಿ ಮಹದೇವಪ್ಪ ಅವರೇ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವರಾಗಿ ಎರಡು ವರ್ಷ ಕಳೆದಿದೆ. ಆದರೂ, ಡಾ.ಅಂಬೇಡ್ಕರ್ ಭವನದ ಕಟ್ಟಡ ಮಾತ್ರ ಇನ್ನೂ ಪೂರ್ಣಗೊಳ್ಳದೆ ನಿರ್ಲಕ್ಷ್ಯಕ್ಕೊಳಗಾಗಿರುವುದೇಕೆ? ಇದಕ್ಕೆ ಯಾರು ಕಾರಣ ಎಂಬ ಅನುಮಾನಗಳು ಮೈಸೂರು ಜಿಲ್ಲೆಯ ದಲಿತರನ್ನು ಕಾಡುತ್ತಿದೆ ಎಂದು ಹೇಳಿದರು.

ಹೀಗಾಗಿ ಡಿಸೆಂಬರ್‌ 6 ರ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನದ ಒಳಗೆ ಕಾಮಗಾರಿ ಪ್ರಾರಂಭಿಸಿ 2025ರ ಅಂಬೇಡ್ಕರ್ ಜನ್ಮ ದಿನದಂದು ಭವನ ಉದ್ಘಾಟನೆಗೊಳ್ಳಲು ಸಹಕಾರಿಯಾಗುವಂತೆ ಹಣ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಬೇಕೆಂದು ಒತ್ತಾಯಿಸಿದರು.

ತಪ್ಪಿದ್ದಲ್ಲಿ ಜಿಲ್ಲೆಯಲ್ಲಿ ನಡೆಯುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಯಾವುದೇ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸುವುದನ್ನು ತಡೆಯಲಾಗುವುದು. ಅಲ್ಲದೆ ಅಂಬೇಡ್ಕರ್ ಕಾರ್ಯಕ್ರಮ ನಡೆಸಲು ಮೈಸೂರು ಜಿಲ್ಲಾಡಳಿತಕ್ಕೂ ನೈತಿಕತೆ ಇಲ್ಲದ ಕಾರಣ ಸರ್ಕಾರ ನಡೆಸುವ ಅಂಬೇಡ್ಕರ್ ಕಾರ್ಯಕ್ರಮಗಳಿಗೂ ಕೂಡ ತಡೆಯೊಡ್ಡಬೇಕಾಗುತ್ತದೆ ಎಂದು  ಎಚ್ಚರಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ದಸಂಸ ಜಿಲ್ಲಾ ಸಂಚಾಲಕರಾದ ಬೆಟ್ಟಯ್ಯಕೋಟೆ, ಆಲಗೂಡುಶಿವಕುಮಾರ್, ಸಂ.ಸಂಚಾಲಕ ಶಂಭುಲಿಂಗ ಸ್ವಾಮಿ,ತಾ.ಸಂಚಾಲಕ ಕಲ್ಲಹಳ್ಳಿ ಕುಮಾರ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

11 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

11 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

11 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

11 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

12 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

20 hours ago