ಮೈಸೂರು

ಮೈಸೂರು | ವಸಂತ ಗಿಳಿಯಾರ್‌ ವಿರುದ್ಧ ದೂರು ದಾಖಲಿಸಿದ ಒಡನಾಡಿ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ

ಮೈಸೂರು : ಸುಳ್ಳು ಆರೋಪ, ಆಧಾರರಹಿತ ಬಾಷಣ, ಧಾರ್ಮಿಕ ಭಾವನೆಗಳನ್ನ ಪ್ರಚೋದಿಸಿ ನನ್ನ ಶಾಂತಿಯುತ ಜೀವ ಭದ್ರತೆಗೆ ಧಕ್ಕೆ ಉಂಟು ಮಾಡಿರುವ ಉಡುಪಿ ಮೂಲದ ವಸಂತ ಗಿಳಿಯಾರ್ ವಿರುದ್ದ ಸೂಕ್ತ ಕ್ರಮ ಕೈಘೊಳ್ಳುವಂತೆ ಒಡನಾಡಿ ಸೇವಾಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಸಂತ ಗಿಳಿಯಾರ್ ಅವರು ತಮ್ಮ ಭಾಷಣದಲ್ಲಿ ನನ್ನನ್ನು ಕ್ರೈಸ್ತ ಧರ್ಮದವನೆಂದು ಗುರುತಿಸಿದ್ದಾನೆ. ಧರ್ಮಸ್ಥಳವನ್ನು ಹಂದಿ ಹೊಡೆದಂತೆ ಹೊಡೆಯಬೇಕೆಂದು ಹೇಳಿಕೆ ನೀಡಿದ್ದಾರೆ. ಹಿಂದು ಧರ್ಮ ಹಾಗೂ ದೇವಸ್ಥಾನವನ್ನು ಹೊಡೆಯಲು ಬಂದಿದ್ದಾನೆ ಎಂದು ಜಾಲತಾಣಗಳು, ಮಾಧ್ಯಮಗಳು, ಸಭೆಗಳಲ್ಲಿ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ.

ಸುಳ್ಳು ಸುದ್ದಿಗಳನ್ನ ಹರಡುವ ಮೂಲಕ ಕೋಮುದ್ವೇಷ ಉಂಟು ಮಾಡುತ್ತಿದ್ದಾರೆ. ಸಮಾಜದ ಒಂದು ಭಾಗವನ್ನು ಎತ್ತಿಕಟ್ಟುತ್ತಿದ್ದಾರೆ, ಧಾರ್ಮಿಕ ಭಾವನೆಗಳನ್ನ ಪ್ರಚೋದಿಸಿ ಜನರನ್ನ ಕೆಣಕುವಂತೆ ಮಾಡಿದ್ದು, ನನ್ನ ಜೀವ ಭದ್ರತೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಸ್ಟ್ಯಾನ್ಲಿ ಅವರು ವಿವಿದ ಸೆಕ್ಷನ್‌ಗಳ ಅಡಿಯಲ್ಲಿ ವಸಂತ ಗಿಳಿಯಾರ್ ವಿರುದ್ದ ದೂರು ನೀಡಿದ್ದಾರೆ.

ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಒಡನಾಡಿ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ, ನಗರದ ಹೂಟಗಳ್ಳಿಯ ಎಸ್.ಆರ್.ಎಸ್.ಕಾಲೋನಿಯಲ್ಲಿರುವ ಒಡನಾಡಿ ಸೇವಾ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿಯಾಗಿ ಹಾಗೂ ನಿರ್ದೇಶಕರಲ್ಲಿ ಒಬ್ಬನಾಗಿ ಕಳೆದ ೩೫ ವರ್ಷಗಳಿಂದ ಮಹಿಳೆಯರ ಮತ್ತು ಮಕ್ಕಳ ಮೇಲಿನ ಲೈಂಗಿಕ ಶೋಷಣೆಯ ವಿರುದ್ಧ ಕಾನೂನು ಬದ್ರವಾಗಿ ಹಾಗೂ ಸರ್ಕಾರಿ ಇಲಾಖೆಗಳ ಜೊತೆ ಸೇರಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದರು.

ಬಹಳ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಸೌಜನ್ಯ ಎಂಬ ಅಪ್ರಾಪ್ತ ಹುಡುಗಿಯ ಪಹರಣ, ಅತ್ಯಾಚಾರ ಹಾಗೂ ಹತ್ಯೆಗೆ ಯಾವುದೇ ರೀತಿಯ ನ್ಯಾಯ ಲಭಿಸದೆ ಇರುವ ಕಾರಣ ಸಾಮಾಜಿಕ ಹೋರಾಟವೊಂದು ರಾಜ್ಯಾದ್ಯಂತ ನಡೆಯುತ್ತಿದೆ.

ಸ್ವಾಭಾವಿಕವಾಗಿಯೇ ಮಹಿಳಾ ಪರವಾದ ಒಡನಾಡಿ ಸಂಸ್ಥೆ ಹಾಗೂ ನಾನು ನೈತಿಕ ಹೊಣೆಗಾರಿಕೆಯೊಡನೆ ಆ ನತದೃಷ್ಟ ಬಾಲಕಿಗೆ ಸಿಗಬೇಕಾದ ಅನುಶಾಸನಬದ್ಧ ನ್ಯಾಯಕ್ಕಾಗಿ ನಮ್ಮನ್ನು ನಾವು ತೊಡಗಿಸಿಕೊಂಡು ಕಾನೂನಿನ ವ್ಯಾಪ್ತಿಯಲ್ಲಿ ಸಂವಿಧಾನಾತ್ಮಕವಾದ ಇರಾಟವನ್ನು ನಡೆಸುತ್ತಾ ಬರುತ್ತಿದ್ದೇವೆ.

ಈ ಹಿನ್ನೆಲೆಯಲ್ಲಿ ವಸಂತ ಗಿಳಿಯಾರ್ ಎಂಬಾತ ಧರ್ಮದಂಗಲ್ ನಡೆಸಲು ಕಾರಣನಾಗುತ್ತಿದ್ದಾನೆ. ಅವನಿಗೆ ಬುದ್ಧಿ ಬರಬೇಕು ಅಂತ ಎಫ್‌ಐಆರ್ ಮಾಡಿಸಿರುವೆ. ನನ್ನ ವಿರುದ್ಧ ಹಲವು ಬಾರಿ ವೈಯಕ್ತಿಕ ದ್ವೇಷ ಕಾರುತ್ತಿದ್ದಾನೆ. ಜಾಲತಾಣದಲ್ಲಿ ಹೇಳಿಕೆ ತಿರುಚಿ ನನ್ನ ಘನತೆಗೆ ಧಕ್ಕೆ ತಂದಿದ್ದಾನೆ. ಎರಡು ಬಾರಿ ನೋಟಿಸ್ ಕಳಿಸಿದ್ದರೂ ಪ್ರತಿಕ್ರಿಯೆ ನೀಡಿರಲಿಲ್ಲ. ಈ ಕಾರಣಕ್ಕೆ ಎಫ್‌ಐ ಆರ್ ದಾಖಲಿಸಿರುವೆ. ಆತನಿಗೆ ಒಳ್ಳೆ ಬುದ್ಧಿ ಬರಲಿ ಅಂತ ಎಫ್‌ಐಆರ್ ಮಾಡಿರುವೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

9 mins ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

46 mins ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

1 hour ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

1 hour ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

1 hour ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

2 hours ago