ಮೈಸೂರು : ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಮೈಮುಲ್) ಅಧ್ಯಕ್ಷ ಸ್ಥಾನಕ್ಕೆ ಆರ್.ಚೆಲುವರಾಜು ರಾಜೀನಾಮೆ ನೀಡಿದ್ದಾರೆ.
ಅಧಿಕಾರ ಹಂಚಿಕೆಯ ಒಪ್ಪಂದದಂತೆ ಹೈಕಮಾಂಡ್ ನಿರ್ದೇಶನದ ಮೇರೆಗೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ವಾಪಸ್ ಪಡೆಯಲು ಹದಿನೈದು ದಿನಗಳ ಸಮಯವಿದೆ. ಕಳೆದ ಎರಡು ತಿಂಗಳಿನಿಂದ ರಾಜೀನಾಮೆ ವಿಚಾರದಲ್ಲಿ ನಡೆಯುತ್ತಿದ್ದ ಆಂತರಿಕ ಮುಸುಕಿನ ಗುದ್ದಾಟಕ್ಕೂ ಬ್ರೇಕ್ ಬಿದ್ದಿದೆ.
ಮೈಮುಲ್ನ ಐದು ವರ್ಷಗಳ ಆಡಳಿತಮಂಡಳಿಯ ಚುನಾವಣೆ ನಡೆದು ಮೊದಲಿಗೆ ಪಿರಿಯಾಪಟ್ಟಣ ಕ್ಷೇತ್ರದ ಮಾಜಿ ಶಾಸಕ ಕೆ.ಮಹದೇವ ಪುತ್ರ ಪಿ.ಎಂ. ಪ್ರಸನ್ನ ಆಯ್ಕೆಯಾಗಿದ್ದರು. ನಂತರ, ತಮಗೆ ಮುಕ್ತವಾಗಿ ಕೆಲಸ ಮಾಡಲು ಸಚಿವರೊಬ್ಬರು ಅವಕಾಶ ಕೊಡದೆ ಕಿರುಕುಳ ನೀಡುತ್ತಿದ್ದಾರೆಂದು ರಾಜೀನಾಮೆ ನೀಡಿದ್ದರು. ನಂತರ, 2024 ಆಗಸ್ಟ್ ತಿಂಗಳ 8 ರಂದು ನಡೆದ ಚುನಾವಣೆಯಲ್ಲಿ ತಿ.ನರಸೀಪುರ ತಾಲ್ಲೂಕಿನ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದ ಆರ್.ಚೆಲುವರಾಜು ಅವಿರೋಧವಾಗಿ ಆಯ್ಕೆಯಾಗಿದ್ದರು. ಇದೀಗ ಪಕ್ಷದ ಒಳಗೆ ನಡೆದ ಅಽಕಾರ ಹಂಚಿಕೆ ಪ್ರಕಾರ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಉಳಿದ ಅವಧಿಗೆ ಎಚ್.ಡಿ.ಕೋಟೆ ತಾಲ್ಲೂಕಿನ ಈರೇಗೌಡ ಅವರಿಗೆ ಅವಕಾಶ ದೊರೆಯುವ ಸಾಧ್ಯತೆ ಇದೆ. ಎರಡು ತಿಂಗಳಿಂದ ಅಧ್ಯಕ್ಷ ಆರ್.ಚೆಲುವರಾಜು ಅವರಿಂದ ರಾಜೀನಾಮೆ ಕೊಡಿಸುವಂತೆ ಆಕಾಂಕ್ಷಿ ಈರೇಗೌಡ ಸೇರಿದಂತೆ ಕಾಂಗ್ರೆಸ್ ಶಾಸಕರು ಒತ್ತಡ ಹೇರಿದ್ದರು. ಬಳಿಕ, ಎರಡು ತಿಂಗಳ ಸಮಯ ಪಡೆದಿದ್ದ ಚೆಲುವರಾಜು ಕೊನೆಗೂ ರಾಜೀನಾಮೆ ಕೊಟ್ಟಿದ್ದಾರೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…