ಮೈಸೂರು

Mysuru dasara 2024: ದಸರಾ ಮಹೋತ್ಸವ: ಕವಿಗೋಷ್ಠಿಗೆ ಅರ್ಜಿ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕವಿಗೋಷ್ಠಿ ಉಪ ಸಮಿತಿಯಿಂದ ಅಕ್ಟೋಬರ್ 05 ರಿಂದ 09 ರವರೆಗೆ ಐದು ದಿನಗಳ ವೈವಿಧ್ಯಮಯ ಕವಿಗೋಷ್ಠಿ ಕಾರ್ಯಕ್ರಮಗಳನ್ನು ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಪ್ರಾದೇಶಿಕ ಕವಿಗೋಷ್ಠಿ ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಾದೇಶಿಕ ಕವಿಗೋಷ್ಠಿಗೆ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಮಡಿಕೇರಿ ಜಿಲ್ಲೆಗಳ ಕವಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವವರು ಕನಿಷ್ಠ ಒಂದು ಕವನ ಸಂಕಲನ ಪ್ರಕಟಿಸಿರಬೇಕು ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಒಬ್ಬರಂತೆ ಭಾಗವಹಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಕನಿಷ್ಠ ಎರಡು ಕವನ ಸಂಕಲನಗಳನ್ನು ಪ್ರಕಟಿಸಿರಬೇಕು. ಕವಿತೆಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕು. ಕಳೆದ ಎರಡು ವರ್ಷಗಳಿಂದ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದವರು ತಮ್ಮ ಸ್ವ ವಿವರ ಮತ್ತು ಕವನ ಸಂಕಲನಗಳೊoದಿಗೆ ಅರ್ಜಿಗಳನ್ನು ದಸರಾ ಕವಿಗೋಷ್ಠಿ ಉಪಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಿಗೆ ನೇರವಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸೆಪ್ಟಂಬರ್ 12 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9902242703, 6360351727 ಹಾಗೂ ಕವಿಗಳಿಗೆ ಕಾರ್ಯಕ್ರಮಕೊಡಿಸುವುದಾಗಿ ಯಾವುದೇ ಮಧ್ಯವರ್ತಿಗಳು ಸಂಪರ್ಕಿಸಿ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಮಾಹಿತಿ ಸಮೇತ ಮೇಲ್ಕಾಣಿಸಿದ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಬಹುದು ಎಂದು ದಸರಾ ಕವಿಗೋಷ್ಠಿ ಉಪ ಸಮಿತಿಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

7 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

20 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

20 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

20 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

21 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

21 hours ago