ಮೈಸೂರು

Mysuru dasara 2024: ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

ಮೈಸೂರು:  ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿಗೆ ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ಬುಧವಾರ(ಆ.21) ಅಭಿಮನ್ಯು ನೇತೃತ್ವದ 9 ಗಜಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿ: ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ.ಆಗಸ್ಟ್‌ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.


ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ

ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್‌ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

6 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

9 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

11 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

11 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

11 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

12 hours ago