ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿಗೆ ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ಬುಧವಾರ(ಆ.21) ಅಭಿಮನ್ಯು ನೇತೃತ್ವದ 9 ಗಜಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.
ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.
ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿ: ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ.ಆಗಸ್ಟ್ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.
ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ
ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…