ಬೆಂಗಳೂರು: ಕಳೆದ ಬಾರಿ ವಿಶ್ವಾವಿಖ್ಯಾತ ನಾಡಹಬ್ಬ ದಸರಾ ಮೇಲೆ ಬರದ ಕರಿ ನೆರಳು ಆವರಿಸಿದ್ದ ಕಾರಣ ರಾಜ್ಯ ಸರ್ಕಾರ ಸರಳ ದಸರಾ ಆಚರಣೆ ಮಾಡಿತ್ತು. ಆದರೆ, ಇದೀಗ ಆಗಿಲ್ಲ, ಈ ಬಾರಿ ಅದ್ದೂರಿ ದಸರಾ ಆಚರಣೆಗೆ ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದ್ದು, ಜಂಬೂ ಸವಾರಿಯ ಮುಹೂರ್ತ ಕೂಡ ಫಿಕ್ಸ್ ಮಾಡಿದೆ.
ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಸೋಮವಾರ(ಆ.12) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ದಿಯ ಹಿನ್ನೆಲೆಯಲ್ಲಿ ಅದ್ದೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಮಾಡಿದೆ ಎಂದರು.
ಅಕ್ಟೋಬರ್ 3 ರಿಂದ 12 ರವರೆಗೆ ದಸರಾ ನಡೆಯಲಿದೆ. ಅಕ್ಟೋಬರ್ 3ರ ಬೆಳಿಗ್ಗೆ 9ಗಂಟೆ 10 ನಿಮಿಷಕ್ಕೆ ಚಾಮುಂಡಿ ಬೆಟ್ಟದಲ್ಲಿ ಪೂಜೆ ಮತ್ತು ದಸರಾ ಉದ್ಘಾಟನೆ ಮಾಡಲಾಗುತ್ತದೆ. ಅಕ್ಟೋಬರ್ 12ರ ಮಧ್ಯಾಹ್ನ 12 ಗಂಟೆ 10 ನಿಮಿಷಕ್ಕೆ ಜಂಬೂ ಸವಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು.
ಕಳೆದ ವರ್ಷ ದಸರಾಗೆ 30ಕೋಟಿ ಖರ್ಚಾಗಿತ್ತು. ಈ ಸಲ ಇನ್ನಷ್ಟು ಹೆಚ್ಚು ಹಣ ಒದಗಿಸುವ ಇಂಗಿತ ವ್ಯಕ್ತಪಡಿಸಲಾಗಿದೆ ಎಂದರು.
ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ.ಜೆ.ಜಾರ್ಜ್, ಹೆಚ್.ಕೆ. ಪಾಟೀಲ, ಕೆ. ವೆಂಕಟೇಶ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಸಚಿವರು, ಶಾಸಕರುಗಳು ಹಾಗೂ ಮುಖ್ಯಮಂತ್ರಿಯರ ಅಪರ ಮುಖ್ಯ ಕಾರ್ಯದರ್ಶಿಎಲ್.ಕೆ.ಅತೀಕ್ ಸೇರಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು..̇
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು : ಟಾಟಾ ಐಪಿಎಲ್ನ ಕ್ರಿಕೆಟ್ ಪಂದ್ಯಗಳು ಏಪ್ರಿಲ್ 15 ಹಾಗೂ ಏಪ್ರಿಲ್ 24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…
ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…
ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…