ಬೆಂಗಳೂರು: ಕಳೆದ ಬಾರಿ ವಿಶ್ವಾವಿಖ್ಯಾತ ನಾಡಹಬ್ಬ ದಸರಾ ಮೇಲೆ ಬರದ ಕರಿ ನೆರಳು ಆವರಿಸಿದ್ದ ಕಾರಣ ರಾಜ್ಯ ಸರ್ಕಾರ ಸರಳ ದಸರಾ ಆಚರಣೆ ಮಾಡಿತ್ತು. ಆದರೆ, ಇದೀಗ ಆಗಿಲ್ಲ, ಈ ಬಾರಿ ಅದ್ದೂರಿ ದಸರಾ ಆಚರಣೆಗೆ ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದ್ದು, ಜಂಬೂ ಸವಾರಿಯ ಮುಹೂರ್ತ ಕೂಡ ಫಿಕ್ಸ್ ಮಾಡಿದೆ.
ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಸೋಮವಾರ(ಆ.12) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ದಿಯ ಹಿನ್ನೆಲೆಯಲ್ಲಿ ಅದ್ದೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಮಾಡಿದೆ ಎಂದರು.
ಅಕ್ಟೋಬರ್ 3 ರಿಂದ 12 ರವರೆಗೆ ದಸರಾ ನಡೆಯಲಿದೆ. ಅಕ್ಟೋಬರ್ 3ರ ಬೆಳಿಗ್ಗೆ 9ಗಂಟೆ 10 ನಿಮಿಷಕ್ಕೆ ಚಾಮುಂಡಿ ಬೆಟ್ಟದಲ್ಲಿ ಪೂಜೆ ಮತ್ತು ದಸರಾ ಉದ್ಘಾಟನೆ ಮಾಡಲಾಗುತ್ತದೆ. ಅಕ್ಟೋಬರ್ 12ರ ಮಧ್ಯಾಹ್ನ 12 ಗಂಟೆ 10 ನಿಮಿಷಕ್ಕೆ ಜಂಬೂ ಸವಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು.
ಕಳೆದ ವರ್ಷ ದಸರಾಗೆ 30ಕೋಟಿ ಖರ್ಚಾಗಿತ್ತು. ಈ ಸಲ ಇನ್ನಷ್ಟು ಹೆಚ್ಚು ಹಣ ಒದಗಿಸುವ ಇಂಗಿತ ವ್ಯಕ್ತಪಡಿಸಲಾಗಿದೆ ಎಂದರು.
ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ.ಜೆ.ಜಾರ್ಜ್, ಹೆಚ್.ಕೆ. ಪಾಟೀಲ, ಕೆ. ವೆಂಕಟೇಶ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಸಚಿವರು, ಶಾಸಕರುಗಳು ಹಾಗೂ ಮುಖ್ಯಮಂತ್ರಿಯರ ಅಪರ ಮುಖ್ಯ ಕಾರ್ಯದರ್ಶಿಎಲ್.ಕೆ.ಅತೀಕ್ ಸೇರಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು..̇
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…