ಮೈಸೂರು: ಮೈನವಿರೇಳಿಸಿದ ಚಮತ್ಕಾರ, ಬೆಂಕಿಯೊಂದಿಗೆ ಸರಸಾಟ, ನಿಬ್ಬೆರಗಾಗಿಸುವ ಅಶ್ವರೋಹಿ ದಳದ ಪಥಸಂಚಲನ, ಅತ್ಯಾಕರ್ಷಕ ನೃತ್ಯ, ಬಾನಂಗಳದಲ್ಲಿ ಚಿತ್ತಾರ, ವೈಭವದ ಸಂಗಮ…..
ಇವು ಜಂಬೂಸವಾರಿ ಬಳಿಕ ಬನ್ನಿಮಂಟಪದ ಪಂಚಿನ ಕವಾಯತು ಮೈದಾನದಲ್ಲಿ ಶನಿವಾರ ರಾತ್ರಿ ಕಂಡ ದೃಶ್ಯಗಳಿವು. ಈ ಮೂಲಕ ʼವಿಶ್ವವಿಖ್ಯಾತ ಮೈಸೂರು ದಸರಾ 2024ʼಕ್ಕೆ ವರ್ಣರಂಜಿತ ತೆರೆಬಿತ್ತು.
ಸುಮಾರು ಎರಡು ಗಂಟೆ ನಡೆದ ಪ್ರದರ್ಶನ ನೆರೆದಿದ್ದ ಸಹಸ್ರಾರು ಮಂದಿಯನ್ನು ವಿಸ್ಮಯ ಲೋಕಕ್ಕೆ ಕರೆದೊಯ್ದಿತು. ನುರಿತ ಸಾಹಸ ಪ್ರದರ್ಶನಕಾರರು ತಮ್ಮ ಅನುಭವ ಹಾಗೂ ಪ್ರತಿಭೆ ಧಾರೆ ಎರೆಯುವ ಮೂಲಕ ಕಿಕ್ಕಿರಿದು ತುಂಬಿದ್ದ ಜನಸ್ತೋಮದ ಹುಬ್ಬೆರುವಂತೆ ಮಾಡಿದರು.
ಚಿತ್ತಕರ್ಷಕ ಪಥಸಂಚಲನ ಹಾಗೂ ನೆರದಿದ್ದ ಪ್ರೇಕ್ಷಕರಲ್ಲಿ ದೇಶಪ್ರೇಮ ಉಕ್ಕಿ ಹರಿಯುವಂತೆ ಮಾಡಿದರೆ, ಶ್ವೇತಾಶ್ವ ತಂಡದವರು ಬೈಕ್ನಲ್ಲಿ ಮೆರೆದ ಚಾಕ ಚಕ್ಯತೆ, ಕುಶಲತೆಯಿಂದ ನೀಡಿದ ಕಸರತ್ತು ಎಲ್ಲರನ್ನೂ ಉಸಿರು ಬಿಗಿಹಿಡಿಯುವಂತೆ ಮಾಡಿತು. ಮತ್ತಷ್ಟು ಕಲಾವಿದರ ನೃತ್ಯ ವೈಭವದ ಮೂಲಕ ಜನರಿಗೆ ಮನರಂಜನೆ ಉಣಬಡಿಸಿದರು.
ಜಂಬೂಸವಾರಿಗೆ ಪುಷ್ಪರ್ಚನೆ ಮೂಲಕ ಚಾಲನೆ ನೀಡಿ ಸಿಎಂ, ಡಿಸಿಎಂ, ರಾತ್ರಿ ನಡೆದ ಪಂಜಿನ ಕವಾಯತಿನಲ್ಲೂ ಭಾಗಿಯಾಗಿದ್ದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ರಾಜ್ಯಪಾಲ ಥಾವರ್ಚಂದ್ ಗೆಹ್ಲೊಟ್ ಅವರಿಗೆ ಪೊಲೀಸ್ ಇಲಾಖೆ ಗೌರವ ವಂದನೆ ಸಲ್ಲಿಸಿತು.
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…