ಮೈಸೂರು

2024ನೇ ಸಾಲಿನ ದಸರಾಗೆ ಪಂಜಿನ ಕವಾಯತಿನ ಮೂಲಕ ವರ್ಣರಂಜಿತ ತೆರೆ

ಮೈಸೂರು: ಮೈನವಿರೇಳಿಸಿದ ಚಮತ್ಕಾರ, ಬೆಂಕಿಯೊಂದಿಗೆ ಸರಸಾಟ, ನಿಬ್ಬೆರಗಾಗಿಸುವ ಅಶ್ವರೋಹಿ ದಳದ ಪಥಸಂಚಲನ, ಅತ್ಯಾಕರ್ಷಕ ನೃತ್ಯ, ಬಾನಂಗಳದಲ್ಲಿ ಚಿತ್ತಾರ, ವೈಭವದ ಸಂಗಮ…..

ಇವು ಜಂಬೂಸವಾರಿ ಬಳಿಕ ಬನ್ನಿಮಂಟಪದ ಪಂಚಿನ ಕವಾಯತು ಮೈದಾನದಲ್ಲಿ ಶನಿವಾರ ರಾತ್ರಿ ಕಂಡ ದೃಶ್ಯಗಳಿವು. ಈ ಮೂಲಕ ʼವಿಶ್ವವಿಖ್ಯಾತ ಮೈಸೂರು ದಸರಾ 2024ʼಕ್ಕೆ ವರ್ಣರಂಜಿತ ತೆರೆಬಿತ್ತು.

ಸುಮಾರು ಎರಡು ಗಂಟೆ ನಡೆದ ಪ್ರದರ್ಶನ ನೆರೆದಿದ್ದ ಸಹಸ್ರಾರು ಮಂದಿಯನ್ನು ವಿಸ್ಮಯ ಲೋಕಕ್ಕೆ ಕರೆದೊಯ್ದಿತು. ನುರಿತ ಸಾಹಸ ಪ್ರದರ್ಶನಕಾರರು ತಮ್ಮ ಅನುಭವ ಹಾಗೂ ಪ್ರತಿಭೆ ಧಾರೆ ಎರೆಯುವ ಮೂಲಕ ಕಿಕ್ಕಿರಿದು ತುಂಬಿದ್ದ ಜನಸ್ತೋಮದ ಹುಬ್ಬೆರುವಂತೆ ಮಾಡಿದರು.

ಚಿತ್ತಕರ್ಷಕ ಪಥಸಂಚಲನ ಹಾಗೂ ನೆರದಿದ್ದ ಪ್ರೇಕ್ಷಕರಲ್ಲಿ ದೇಶಪ್ರೇಮ ಉಕ್ಕಿ ಹರಿಯುವಂತೆ ಮಾಡಿದರೆ, ಶ್ವೇತಾಶ್ವ ತಂಡದವರು ಬೈಕ್‌ನಲ್ಲಿ ಮೆರೆದ ಚಾಕ ಚಕ್ಯತೆ, ಕುಶಲತೆಯಿಂದ ನೀಡಿದ ಕಸರತ್ತು ಎಲ್ಲರನ್ನೂ ಉಸಿರು ಬಿಗಿಹಿಡಿಯುವಂತೆ ಮಾಡಿತು. ಮತ್ತಷ್ಟು ಕಲಾವಿದರ ನೃತ್ಯ ವೈಭವದ ಮೂಲಕ ಜನರಿಗೆ ಮನರಂಜನೆ ಉಣಬಡಿಸಿದರು.

ಜಂಬೂಸವಾರಿಗೆ ಪುಷ್ಪರ್ಚನೆ ಮೂಲಕ ಚಾಲನೆ ನೀಡಿ ಸಿಎಂ, ಡಿಸಿಎಂ, ರಾತ್ರಿ ನಡೆದ ಪಂಜಿನ ಕವಾಯತಿನಲ್ಲೂ ಭಾಗಿಯಾಗಿದ್ದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೊಟ್‌ ಅವರಿಗೆ ಪೊಲೀಸ್‌ ಇಲಾಖೆ ಗೌರವ ವಂದನೆ ಸಲ್ಲಿಸಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago