ಮೈಸೂರು

2024ನೇ ಸಾಲಿನ ದಸರಾಗೆ ಪಂಜಿನ ಕವಾಯತಿನ ಮೂಲಕ ವರ್ಣರಂಜಿತ ತೆರೆ

ಮೈಸೂರು: ಮೈನವಿರೇಳಿಸಿದ ಚಮತ್ಕಾರ, ಬೆಂಕಿಯೊಂದಿಗೆ ಸರಸಾಟ, ನಿಬ್ಬೆರಗಾಗಿಸುವ ಅಶ್ವರೋಹಿ ದಳದ ಪಥಸಂಚಲನ, ಅತ್ಯಾಕರ್ಷಕ ನೃತ್ಯ, ಬಾನಂಗಳದಲ್ಲಿ ಚಿತ್ತಾರ, ವೈಭವದ ಸಂಗಮ…..

ಇವು ಜಂಬೂಸವಾರಿ ಬಳಿಕ ಬನ್ನಿಮಂಟಪದ ಪಂಚಿನ ಕವಾಯತು ಮೈದಾನದಲ್ಲಿ ಶನಿವಾರ ರಾತ್ರಿ ಕಂಡ ದೃಶ್ಯಗಳಿವು. ಈ ಮೂಲಕ ʼವಿಶ್ವವಿಖ್ಯಾತ ಮೈಸೂರು ದಸರಾ 2024ʼಕ್ಕೆ ವರ್ಣರಂಜಿತ ತೆರೆಬಿತ್ತು.

ಸುಮಾರು ಎರಡು ಗಂಟೆ ನಡೆದ ಪ್ರದರ್ಶನ ನೆರೆದಿದ್ದ ಸಹಸ್ರಾರು ಮಂದಿಯನ್ನು ವಿಸ್ಮಯ ಲೋಕಕ್ಕೆ ಕರೆದೊಯ್ದಿತು. ನುರಿತ ಸಾಹಸ ಪ್ರದರ್ಶನಕಾರರು ತಮ್ಮ ಅನುಭವ ಹಾಗೂ ಪ್ರತಿಭೆ ಧಾರೆ ಎರೆಯುವ ಮೂಲಕ ಕಿಕ್ಕಿರಿದು ತುಂಬಿದ್ದ ಜನಸ್ತೋಮದ ಹುಬ್ಬೆರುವಂತೆ ಮಾಡಿದರು.

ಚಿತ್ತಕರ್ಷಕ ಪಥಸಂಚಲನ ಹಾಗೂ ನೆರದಿದ್ದ ಪ್ರೇಕ್ಷಕರಲ್ಲಿ ದೇಶಪ್ರೇಮ ಉಕ್ಕಿ ಹರಿಯುವಂತೆ ಮಾಡಿದರೆ, ಶ್ವೇತಾಶ್ವ ತಂಡದವರು ಬೈಕ್‌ನಲ್ಲಿ ಮೆರೆದ ಚಾಕ ಚಕ್ಯತೆ, ಕುಶಲತೆಯಿಂದ ನೀಡಿದ ಕಸರತ್ತು ಎಲ್ಲರನ್ನೂ ಉಸಿರು ಬಿಗಿಹಿಡಿಯುವಂತೆ ಮಾಡಿತು. ಮತ್ತಷ್ಟು ಕಲಾವಿದರ ನೃತ್ಯ ವೈಭವದ ಮೂಲಕ ಜನರಿಗೆ ಮನರಂಜನೆ ಉಣಬಡಿಸಿದರು.

ಜಂಬೂಸವಾರಿಗೆ ಪುಷ್ಪರ್ಚನೆ ಮೂಲಕ ಚಾಲನೆ ನೀಡಿ ಸಿಎಂ, ಡಿಸಿಎಂ, ರಾತ್ರಿ ನಡೆದ ಪಂಜಿನ ಕವಾಯತಿನಲ್ಲೂ ಭಾಗಿಯಾಗಿದ್ದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೊಟ್‌ ಅವರಿಗೆ ಪೊಲೀಸ್‌ ಇಲಾಖೆ ಗೌರವ ವಂದನೆ ಸಲ್ಲಿಸಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

21 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

38 mins ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

1 hour ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

2 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

3 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago