ಮೈಸೂರು

2024ನೇ ಸಾಲಿನ ದಸರಾಗೆ ಪಂಜಿನ ಕವಾಯತಿನ ಮೂಲಕ ವರ್ಣರಂಜಿತ ತೆರೆ

ಮೈಸೂರು: ಮೈನವಿರೇಳಿಸಿದ ಚಮತ್ಕಾರ, ಬೆಂಕಿಯೊಂದಿಗೆ ಸರಸಾಟ, ನಿಬ್ಬೆರಗಾಗಿಸುವ ಅಶ್ವರೋಹಿ ದಳದ ಪಥಸಂಚಲನ, ಅತ್ಯಾಕರ್ಷಕ ನೃತ್ಯ, ಬಾನಂಗಳದಲ್ಲಿ ಚಿತ್ತಾರ, ವೈಭವದ ಸಂಗಮ…..

ಇವು ಜಂಬೂಸವಾರಿ ಬಳಿಕ ಬನ್ನಿಮಂಟಪದ ಪಂಚಿನ ಕವಾಯತು ಮೈದಾನದಲ್ಲಿ ಶನಿವಾರ ರಾತ್ರಿ ಕಂಡ ದೃಶ್ಯಗಳಿವು. ಈ ಮೂಲಕ ʼವಿಶ್ವವಿಖ್ಯಾತ ಮೈಸೂರು ದಸರಾ 2024ʼಕ್ಕೆ ವರ್ಣರಂಜಿತ ತೆರೆಬಿತ್ತು.

ಸುಮಾರು ಎರಡು ಗಂಟೆ ನಡೆದ ಪ್ರದರ್ಶನ ನೆರೆದಿದ್ದ ಸಹಸ್ರಾರು ಮಂದಿಯನ್ನು ವಿಸ್ಮಯ ಲೋಕಕ್ಕೆ ಕರೆದೊಯ್ದಿತು. ನುರಿತ ಸಾಹಸ ಪ್ರದರ್ಶನಕಾರರು ತಮ್ಮ ಅನುಭವ ಹಾಗೂ ಪ್ರತಿಭೆ ಧಾರೆ ಎರೆಯುವ ಮೂಲಕ ಕಿಕ್ಕಿರಿದು ತುಂಬಿದ್ದ ಜನಸ್ತೋಮದ ಹುಬ್ಬೆರುವಂತೆ ಮಾಡಿದರು.

ಚಿತ್ತಕರ್ಷಕ ಪಥಸಂಚಲನ ಹಾಗೂ ನೆರದಿದ್ದ ಪ್ರೇಕ್ಷಕರಲ್ಲಿ ದೇಶಪ್ರೇಮ ಉಕ್ಕಿ ಹರಿಯುವಂತೆ ಮಾಡಿದರೆ, ಶ್ವೇತಾಶ್ವ ತಂಡದವರು ಬೈಕ್‌ನಲ್ಲಿ ಮೆರೆದ ಚಾಕ ಚಕ್ಯತೆ, ಕುಶಲತೆಯಿಂದ ನೀಡಿದ ಕಸರತ್ತು ಎಲ್ಲರನ್ನೂ ಉಸಿರು ಬಿಗಿಹಿಡಿಯುವಂತೆ ಮಾಡಿತು. ಮತ್ತಷ್ಟು ಕಲಾವಿದರ ನೃತ್ಯ ವೈಭವದ ಮೂಲಕ ಜನರಿಗೆ ಮನರಂಜನೆ ಉಣಬಡಿಸಿದರು.

ಜಂಬೂಸವಾರಿಗೆ ಪುಷ್ಪರ್ಚನೆ ಮೂಲಕ ಚಾಲನೆ ನೀಡಿ ಸಿಎಂ, ಡಿಸಿಎಂ, ರಾತ್ರಿ ನಡೆದ ಪಂಜಿನ ಕವಾಯತಿನಲ್ಲೂ ಭಾಗಿಯಾಗಿದ್ದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೊಟ್‌ ಅವರಿಗೆ ಪೊಲೀಸ್‌ ಇಲಾಖೆ ಗೌರವ ವಂದನೆ ಸಲ್ಲಿಸಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

52 mins ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

2 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

9 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

9 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

13 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

13 hours ago