ಮೈಸೂರು: ಮೈನವಿರೇಳಿಸಿದ ಚಮತ್ಕಾರ, ಬೆಂಕಿಯೊಂದಿಗೆ ಸರಸಾಟ, ನಿಬ್ಬೆರಗಾಗಿಸುವ ಅಶ್ವರೋಹಿ ದಳದ ಪಥಸಂಚಲನ, ಅತ್ಯಾಕರ್ಷಕ ನೃತ್ಯ, ಬಾನಂಗಳದಲ್ಲಿ ಚಿತ್ತಾರ, ವೈಭವದ ಸಂಗಮ…..
ಇವು ಜಂಬೂಸವಾರಿ ಬಳಿಕ ಬನ್ನಿಮಂಟಪದ ಪಂಚಿನ ಕವಾಯತು ಮೈದಾನದಲ್ಲಿ ಶನಿವಾರ ರಾತ್ರಿ ಕಂಡ ದೃಶ್ಯಗಳಿವು. ಈ ಮೂಲಕ ʼವಿಶ್ವವಿಖ್ಯಾತ ಮೈಸೂರು ದಸರಾ 2024ʼಕ್ಕೆ ವರ್ಣರಂಜಿತ ತೆರೆಬಿತ್ತು.
ಸುಮಾರು ಎರಡು ಗಂಟೆ ನಡೆದ ಪ್ರದರ್ಶನ ನೆರೆದಿದ್ದ ಸಹಸ್ರಾರು ಮಂದಿಯನ್ನು ವಿಸ್ಮಯ ಲೋಕಕ್ಕೆ ಕರೆದೊಯ್ದಿತು. ನುರಿತ ಸಾಹಸ ಪ್ರದರ್ಶನಕಾರರು ತಮ್ಮ ಅನುಭವ ಹಾಗೂ ಪ್ರತಿಭೆ ಧಾರೆ ಎರೆಯುವ ಮೂಲಕ ಕಿಕ್ಕಿರಿದು ತುಂಬಿದ್ದ ಜನಸ್ತೋಮದ ಹುಬ್ಬೆರುವಂತೆ ಮಾಡಿದರು.
ಚಿತ್ತಕರ್ಷಕ ಪಥಸಂಚಲನ ಹಾಗೂ ನೆರದಿದ್ದ ಪ್ರೇಕ್ಷಕರಲ್ಲಿ ದೇಶಪ್ರೇಮ ಉಕ್ಕಿ ಹರಿಯುವಂತೆ ಮಾಡಿದರೆ, ಶ್ವೇತಾಶ್ವ ತಂಡದವರು ಬೈಕ್ನಲ್ಲಿ ಮೆರೆದ ಚಾಕ ಚಕ್ಯತೆ, ಕುಶಲತೆಯಿಂದ ನೀಡಿದ ಕಸರತ್ತು ಎಲ್ಲರನ್ನೂ ಉಸಿರು ಬಿಗಿಹಿಡಿಯುವಂತೆ ಮಾಡಿತು. ಮತ್ತಷ್ಟು ಕಲಾವಿದರ ನೃತ್ಯ ವೈಭವದ ಮೂಲಕ ಜನರಿಗೆ ಮನರಂಜನೆ ಉಣಬಡಿಸಿದರು.
ಜಂಬೂಸವಾರಿಗೆ ಪುಷ್ಪರ್ಚನೆ ಮೂಲಕ ಚಾಲನೆ ನೀಡಿ ಸಿಎಂ, ಡಿಸಿಎಂ, ರಾತ್ರಿ ನಡೆದ ಪಂಜಿನ ಕವಾಯತಿನಲ್ಲೂ ಭಾಗಿಯಾಗಿದ್ದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ರಾಜ್ಯಪಾಲ ಥಾವರ್ಚಂದ್ ಗೆಹ್ಲೊಟ್ ಅವರಿಗೆ ಪೊಲೀಸ್ ಇಲಾಖೆ ಗೌರವ ವಂದನೆ ಸಲ್ಲಿಸಿತು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…