ಬೆಂಗಳೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಪ್ರಮುಖ ರಸ್ತೆಗಳು ಮತ್ತು ವೃತ್ತಗಳು ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ.
ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ಸೋಮವಾರ(ಆ.12) ಬೆಳಕು ಭವನದಲ್ಲಿ ನಡೆದ ಸಭೆಯಲ್ಲಿ, ದಸರಾ ಉತ್ಸವ ಆರಂಭಕ್ಕೆ ಒಂದು ದಿನಮೊದಲು ಅಂದರೆ ಅ. 2ರಿಂದ 21 ದಿನಗಳ ಕಲಾ ದೀಪಾಲಂಕಾರ ಮಾಡಲುನಿರ್ಧರಿಸಲಾಗಿದೆ.
ಅಲ್ಲದೆ, ವಿದ್ಯುತ್ ದೀಪಾಲಂಕಾರ ಈ ಬಾರಿಯ ದಸರಾಗೆ ಮತ್ತಷ್ಟು ಕಳೆ ಕಟ್ಟಬೇಕು. ಈ ವಿಚಾರವಾಗಿ ಸೆಸ್ಕ್ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಸಚಿವರು ನಿರ್ದೇಶಿಸಿದ್ದಾರೆ.
2024ರ ದಸರಾದಲ್ಲಿ 130 ಕಿ.ಮೀ. ರಸ್ತೆಗಳ ಉದ್ದದ್ದಕ್ಕೂ ದೀಪಗಳು ಬೆಳಗಲಿವೆ. 84 ವೃತ್ತಗಳು, ಉದ್ಯಾನವನ ಸೇರಿದಂತೆ ಪ್ರಮುಖ 64 ಸ್ಥಳಗಳಲ್ಲಿ ವಿದ್ಯುತ್ ದೀಪಗಳು ಕಂಗೊಳಿಸಲಿವೆ.
ಹಸಿರು ಚಪ್ಪರ, ಸುಸ್ವಾತಗ, ವಿವಿಧ ಕಮಾನುಗಳು, ನಿಗಮದ ಕಚೇರಿಗಳ ದೀಪಾಲಂಕಾರ, ಛಾಯಾಗ್ರಹಣ ಮತ್ತು ಸಮಾರಂಭಗಳ ವೇದಿಕೆ ಮತ್ತಿತರೆಡೆ ವಿದ್ಯುತ್ ದೀಪಾಲಾಂಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…